ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಭರತನಾಟ್ಯ ತರಬೇತಿ ಉದ್ಘಾಟನೆ 

ಹೆಬ್ರಿ: ತಮ್ಮಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿದಾಗ ಮಾತ್ರ ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ.ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 9 ವಷ೯ಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಲಾಪ್ರಕಾರಗಳನ್ನು ತರಬೇತಿ ನೀಡುವುದರ ಜತೆಗೆ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿದೆ. ಪೋಷಕರು ತಮ್ಮಮಕ್ಕಳನ್ನು ಇಂತಹ ತರಗತಿಗಳಿಗೆ ಸೇರಿಸುವುದರ ಮೂಲಕ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸಿ ಎಂದು ಜೇಸಿಐ ಹೆಬ್ರಿ ಇದರ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದರು. ಅವರು ಜು.2 ರಂದು ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ […]