ಮದ್ಯವ್ಯಸನಿಗಳ ಮಕ್ಕಳಲ್ಲಿ ಭಯ, ಕೀಳರಿಮೆ ಹೆಚ್ಚಳ; ಮದ್ಯವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ ಉದ್ಘಾಟಿಸಿ ನ್ಯಾಯಾಧೀಶೆ ಶರ್ಮಿಳಾ ಅಭಿಮತ

ಉಡುಪಿ: ಮದ್ಯಪಾನ ವ್ಯಸನದ ಪರಿಣಾಮದಿಂದ ಕುಟುಂಬದಲ್ಲಿ ಆರ್ಥಿಕ ಸಮಸ್ಯೆ ತಲೆದೋರಿ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ. ಅಲ್ಲದೆ ಮಕ್ಕಳಲ್ಲಿ ಭಯ, ಆತಂಕ, ಕೀಳರಿದು ಕೂಡ ಉಂಟಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದ್ದಾರೆ. ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಮಣಿಪಾಲ, ರೋಟರಾಕ್ಟ್ ಕ್ಲಬ್ ಮಣಿಪಾಲ, ರೋಟರಾಕ್ಟ್ ಕ್ಲಬ್ಸ್ ಆಫ್ ಮಣಿಪಾಲ, ಐಎಂಎ ಉಡುಪಿ- ಕರಾವಳಿ, ಸಂಸ್ಕೃತಿ ವಿಶ್ವ […]