ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಕೈಗಾರಿಕಾ ಟೌನ್‌ಶಿಪ್ ಪ್ರಾಧಿಕಾರ: ಖಾದರ್

ಮಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕವಾದ ಕೈಗಾರಿಕಾ ಟೌನ್‌ಶಿಪ್ ಪ್ರಾಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.  ಈ ಕುರಿತು ಮಂಗಳೂರಲ್ಲಿ  ಮಂಗಳವಾರ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸ್ವತಂತ್ರವಾಗಿ ನಿರ್ವಹಿಸಲು ಈ ಪ್ರಾಧಿಕಾರವನ್ನು ರಚಿಸಲಾಗುವುದು. ರಾಜ್ಯದ ಮುನಿಸಿಪಲ್ ಕಾಯಿದೆಗೆ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ತಂದು ಈ ಪ್ರಾಧಿಕಾರ ರಚಿಸಲಾಗುವುದು ಎಂದರು. ದಕ್ಷಿಣ ಕನ್ನಡ ಜಿಲೆಯಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ […]