ನಾಳೆ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಕ್ರೀಡಾ ಸಂಕೀರ್ಣ ಕಟ್ಟಡಕ್ಕೆ ಶಿಲಾನ್ಯಾಸ

ಬ್ರಹ್ಮಾವರ: ಬ್ರಹ್ಮಾವರ ಹೆರಂಜೆ ಕ್ಲಬ್ ನಿವೇಶನದಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಕ್ರೀಡಾ ಸಂಕಿರಣ ಕಟ್ಟಡವು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಶಿಲಾನ್ಯಾಸ ನೆರವೇರಲಿದೆ. ಉಡುಪಿ ಶಾಸಕರಾದ ಕೆ. ರಘುಪತಿ ಭಟ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಗುರ್ಮೆ ಫೌಂಡೇಶನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಹುಬ್ಬಳ್ಳಿ ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, […]