ಅಗಲಿದ ಐ.ಪಿ.ಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರಿಗೆ ಶೃದ್ಧಾಂಜಲಿ ಸಮರ್ಪಣೆ.

ಉಡುಪಿ: ಅಗಲಿದ ಪೊಲೀಸ್ ಇಲಾಖೆಯ ದಿಟ್ಟ ಪ್ರಾಮಾಣಿಕ ಐ.ಪಿ.ಎಸ್ ಅಧಿಕಾರಿ ಮಧುಕರ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಆಯೋಜನೆಯಲ್ಲಿ ಮಾರುತಿ ವಿಥಿಕಾದಲ್ಲಿರುವ ಸಮಿತಿಯ ಕಛೇರಿ ವಠಾರದಲ್ಲಿ ಶನಿವಾರ ಸಂಜೆ ನಡೆಯಿತು. ಮಧುಕರ್ ಶೆಟ್ಟಿ ಅವರ ಭಾವಚಿತ್ರಕ್ಕೆ ನುಡಿ ನಮನ ಸಲ್ಲಿಸಿ ಮಾತನಾಡಿದ ಬಡಗುಬೆಟ್ಟು ಸಹಕಾರಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಜಯಕರ್ ಶೆಟ್ಟಿ ಇಂದ್ರಾಳಿ, ಒರ್ವ ಪ್ರಾಮಾಣಿಕ ದಕ್ಷ ಭ್ರಷ್ಟಚಾರಿಗಳಿಗೆ ಕಂಟಕರಾದ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆ ರಾಜ್ಯ ತುಂಬಲಾರದ […]