ಜು.13: ಐವನ್ ಡಿಸೋಜರಿಂದ ಕ್ರೈಸ್ತ ಬಾಂಧವರಿಗೆ ಜನಸ್ಪಂದನ ಕಾರ್ಯಕ್ರಮ

ಉಡುಪಿ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕ್ರೈಸ್ತ ಸಮಾಜ ಬಾಂಧವರಿಗಾಗಿ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರು ಜು. 13ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಮಿಷನ್‌ ಕಂಪೌಂಡ್‌ನ ಸಿಎಸ್‌ಐ ಬಾಯ್ಸ್‌ ಬೋರ್ಡಿಂಗ್‌ ಹೋಮ್‌ (ಸ್ನೇಹಾಲಯ)ನಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಇಂಡಿಯನ್‌ ಕ್ರಿಶ್ಚಿಯನ್‌ ಯೂನಿಯನ್‌ ಒಕ್ಕೂಟದ ಜಂಟಿ ಕಾರ್ಯದರ್ಶಿ ಸ್ಟೀವನ್‌ ಕುಲಾಸೊ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಆಯಾ ಇಲಾಖೆಯ ಯೋಜನೆಗಳ ಮಾಹಿತಿ ನೀಡುವರು. ಐವನ್‌ ಡಿಸೋಜ ಅವರಿಂದ ಸಾರ್ವಜನಿಕರ ಅಹವಾಲು […]