ಕುಮಾರಸ್ವಾಮಿ ವಿರುದ್ಧ ಅವಹೇಳನ: ಕಠಿಣ ಕ್ರಮಕ್ಕೆ ಯುವಜನತಾ ದಳ ಆಗ್ರಹ

ಮಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದು, ಇವರುಗಳ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ದ.ಕ.ಜಿಲ್ಲಾ ಯುವ ಜನತಾದಳ ಆಗ್ರಹಿಸಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಮಾನ್ಯ ಪೋಲಿಸ್ ಆಯುಕ್ತರಿಗೆ ಮತ್ತು ಸೈಬರ್ ಕ್ರೈಮ್ ಪೋಲಿಸರಿಗೆ ದೂರು ಸಲ್ಲಿಸಲಾಯಿತು. ಅಂಥ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಿ, ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ಇಂತಹ ಕೃತ್ಯಗಳನ್ನು ನಡೆಸುವ ಸಮಾಜಘತಕ ಶಕ್ತಿಗಳನ್ನು […]