ಜರ್ಮನಿಯ ಮ್ಯೂನಿಚ್‌ನಲ್ಲಿ ದಂಪತಿಗಳ ಮೇಲೆ ಚೂರಿಯಿಂದ ಇರಿದ, ಕುಂದಾಪುರ ಮೂಲದ ಬಿ.ವಿ.ಪ್ರಶಾಂತ ಸಾವು

ಕುಂದಾಪುರ : ಜರ್ಮನಿಯ ಮ್ಯೂನಿಚ್‌ನಲ್ಲಿ ನೆಲೆಸಿರುವ ಉಡುಪಿ ಜಿಲ್ಲೆ ಕುಂದಾಪುರ ಮೂಲದ ಬಿ.ವಿ.ಪ್ರಶಾಂತ (51) ಹಾಗೂ ಸ್ಮೀತಾ (40)  ದಂಪತಿಗಳ ಮೇಲೆ ಮಾ.29ರಂದು ಆಗಂತುಕನೊಬ್ಬ ಚೂರಿಯಿಂದ ಇರಿದ ಪರಿಣಾಮ ಪ್ರಶಾಂತ ಮೃತಪಟ್ಟು  ಪತ್ನಿ ಸ್ಮೀತಾ ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಪ್ರಶಾಂತ ಅವರ ತಂದೆ ದಿ.ಬಿ.ಎನ್‌.ವೆಂಕಟರಮಣ ಹಾಗೂ ತಾಯಿ ವಿನಯ ಮೂಲತ ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ವ್ಯವಹಾರ ಹಾಗೂ ಕೃಷಿ ಕಾರ್ಯಗಳಿಗಾಗಿ ಅವರು ಕುಟುಂಬ ಸಹಿತರಾಗಿ ಸಾಗರದಲ್ಲಿ ನೆಲೆಸಿದ್ದರು. ವೆಂಕಟರಮಣ ಅವರ ಪೂರ್ವಿಕರು ಕುಂದಾಪುರ ಸಮೀಪದ […]