ರಾಷ್ಟ್ರೀಕೃತ ಬ್ಯಾಂಕ್ ವಿಲೀನ ಸಹಕಾರಿ ಕ್ಷೇತ್ರದ ಮೇಲೆ‌ ಪರಿಣಾಮ ಬೀರಲ್ಲ: ಜಿ.ಆರ್. ಪ್ರಸಾದ್

ಉಡುಪಿ: ಸಹಕಾರ ಕ್ಷೇತ್ರದ ವಾತಾವರಣ ಸದ್ಯ ವಿಷಮ ಸ್ಥಿತಿಯಲ್ಲಿದ್ದು, ಅದನ್ನು ಉತ್ತಮವಾಗಿ ನಡೆಸಲು ಪ್ರೇರೇಪಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯೂ ಸಹಕಾರಿ ಕ್ಷೇತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಂಗಳೂರಿನ ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್‌. ಪ್ರಸಾದ್‌ ಹೇಳಿದರು. ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟ ಮತ್ತು ಬೆಳಗಾವಿಯ ಫಾರ್ಚೂನ್‌ ಇನೋಸರ್ವ್‌ ಪ್ರೈ.ಲಿ. ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಗರದ ಡಯಾನ ಹೋಟೆಲ್‌ನ ಸಭಾಂಗಣದಲ್ಲಿ ಶನಿವಾರ ನಡೆದ ಸಹಕಾರಿ ಕ್ಷೇತ್ರ ಸಂವರ್ಧನೆಯಿಂದ ಸಮೃದ್ಧಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ […]

ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ನೂತನ ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಡಗಬೆಟ್ಟು ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾಗಿ ಸೊಸೈಟಿಯನ್ನು ರಾಷ್ಟ್ರಮಟ್ಟದಲ್ಲಿ ಮಾದರಿ ಸಹಕಾರಿ ಸಂಸ್ಥೆಯನ್ನಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಸೇರಿದಂತೆ ರಾಷ್ಟ್ರ, ರಾಜ್ಯಮಟ್ಟದ ಹಲವಾರು ಪ್ರಶಸ್ತಿ ಪುರಸ್ಕೃತರಾದ ಅವರು ಉಡುಪಿ ತುಳು ಕೂಟದ ಅಧ್ಯಕ್ಷರಾಗಿ, ಮಾಜಿ ಲಯನ್ಸ್‌ ಜಿಲ್ಲಾ ಗವರ್ನರ್‌ ಆಗಿ ಅನೇಕ ಸಂಘ-ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿ ಸಮಾಜಮುಖೀ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿದ್ದಾರೆ.