ಆರಂಭಿಕ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್; ಮೊದಲನೆ ಹಂತದಲ್ಲಿ 116 ಸೀಟುಗಳಲ್ಲಿ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮೊದಲನೆ ಹಂತದ ಎಣಿಕೆಯಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು, 116 ಸೀಟುಗಳಲ್ಲಿ ಮುನ್ನಡೆ ಕಾಯುಕೊಂಡಿದೆ. ಅಂಚೆ ಮತದಾನದ ಎಣಿಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗುತ್ತಿದೆ. ಭಾರತೀಯ ಪಕ್ಷ 83 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಜೆ.ಡಿ.ಎಸ್ 20 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ. ಇತರ 01 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಏತನ್ಮಧ್ಯೆ ಶ್ರೀರಾಮುಲು, ಸುಧಾಕರ್, ರಮೇಶ್ ಜಾರಕಿಹೊಳಿ, ಕುಮಾರಸ್ವಾಮಿ, ಬಿ.ಸಿ.ಪಾಟೀಲ್, ಸಿ.ಟಿ.ರವಿ, ಕಾರಜೋಳ, ಸೋಮಣ್ಣ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ: 72.67% ಮತದಾನ; ಅತಂತ್ರ ಸರಕಾರದ ಮುನ್ಸೂಚನೆ ನೀಡಿದ ಎಕ್ಸಿಟ್ ಪೋಲ್ ಗಳು

ಬೆಂಗಳೂರು: ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸರಿಸುಮಾರು 72.67% ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44% ಮತ್ತು 2013 ರಲ್ಲಿ 71.83% ಮತದಾನವಾಗಿತ್ತು. ದ.ಕ ಜಿಲ್ಲೆಯಲ್ಲಿ 76.15% ಮತದಾನವಾಗಿದ್ದರೆ, ಉಡುಪಿಯಲ್ಲಿ 78.46% ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ವಾಧಿಕ 85.83% ಮತದಾನವಾಗಿದ್ದರೆ, ಬಿ.ಬಿ.ಎಂ.ಪಿ(ದಕ್ಷಿಣ) ದಲ್ಲಿ 52.80% ಮತದಾನ ನಡೆದಿದೆ. ಮೂರು ಪ್ರಮುಖ ಎಕ್ಸಿಟ್ ಪೋಲ್ ಏಜೆನ್ಸಿಗಳು ಸೂಚಿಸಿದಂತೆ ಕರ್ನಾಟಕವು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಗೆ ಬಹುಮತವನ್ನು ಸೂಚಿಸುತ್ತಿದ್ದರೆ ಮತ್ತೆ ಕೆಲವು ಪೋಲ್ […]

ಉಡುಪಿ: ಜೆಡಿಎಸ್ ಚುನಾವಣಾ ಉಸ್ತುವಾರಿಗಳ ನೇಮಕ

ಉಡುಪಿ: ಫೆ. 15 ರಂದು ಜನತಾದಳ(ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾ ಕಚೇರಿ ಕುಮಾರಕೃಪಾದಲ್ಲಿ ಚುನಾವಣಾ ಪೂರ್ವಭಾವಿ ಸಭೆ ಜರುಗಿತು. ಕಾರ್ಯಾಧ್ಯಕ್ಷ ವಾಸುದೇವ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಚುನಾವಣೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪಕ್ಷದ ನಾಯಕ ಸಂಕಪ್ಪ. ಎ ಇವರು ಚುನಾವಣೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಇತ್ತೀಚೆಗೆ ನಿಧನರಾದ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯಧ್ಯಕ್ಷ ರಾಜು ಆರ್ ಪುತ್ರನ್ ಅವರಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಮಾತನಾಡಿ ಪಂಚರತ್ನ ಯೋಜನೆಯ […]

ಬಿಆರ್‌ಎಸ್ ಜೊತೆ ಮೈತ್ರಿ ಮಾಡಲಿರುವ ಜೆಡಿಎಸ್: ರಾಜಕೀಯ ಏಕಸ್ವಾಮ್ಯ ಕೊನೆಗಾಣಿಸಲು ನಿರ್ಧಾರ

ಹೈದರಾಬಾದ್: ಜನತಾ ದಳ ಜಾತ್ಯಾತೀತ(ಜೆಡಿಎಸ್) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೊತೆ ಸಕ್ರಿಯವಾಗಿ ಕೆಲಸ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಲು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಹೊಂದಿದೆ. ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್‌ಎಸ್ ಪಕ್ಷಗಳು […]

ಉಡುಪಿ: ಕಾಂಗ್ರೆಸ್ ನ ಹಿಂದುಳಿದ ವರ್ಗದ ಅಧ್ಯಕ್ಷ ಸಂಕಪ್ಪ. ಎ ಜೆ.ಡಿ.ಎಸ್ ಗೆ ಸೇರ್ಪಡೆ

ಉಡುಪಿ: ಉಡುಪಿಯ ಪ್ರಖ್ಯಾತ ವಕೀಲ, ಬಿಲ್ಲವ ಮುಖಂಡ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷ ಸಂಕಪ್ಪ. ಎ ಆಗಸ್ಟ್ 1 ರಂದು ಜಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಶಾಲು ಹೊದೆಸಿ, ಪಕ್ಷದ ಧ್ವಜ ನೀಡುವ ಮೂಲಕ ವಿದ್ಯುಕ್ತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಉಡುಪಿ ಜಿಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ನಾಯಕರಾದ ವಸಂತ ಪೂಜಾರಿ ಮಂಗಳೂರು, ಇಕ್ಬಾಲ್ ಮಂಗಳೂರು, ಇಕ್ಬಾಲ್ ಅತ್ರಾಡಿ, ಭರತ್ […]