ಮಣ್ಣು ಮತ್ತು ರಾಸಾಯನಿಕದ ಹಂಗಿಲ್ಲದೆ ತನ್ನ 3 ಅಂತಸ್ತಿನ ಮನೆಯಲ್ಲಿ ತರಕಾರಿ ಬೆಳೆದು 70 ಲಕ್ಷ ಗಳಿಸುವ ಮಾಜಿ ಪತ್ರಕರ್ತ!

ಬೆಂಡೆಕಾಯಿ, ಮೆಣಸಿನಕಾಯಿ, ಕ್ಯಾಪ್ಸಿಕಂ, ಸೋರೆಕಾಯಿ, ಟೊಮೆಟೊ, ಹೂಕೋಸು, ಪಾಲಕ್, ಎಲೆಕೋಸು, ಸ್ಟ್ರಾಬೆರಿ, ಮೆಂತ್ಯ ಮತ್ತು ಹಸಿರು ಬಟಾಣಿ….ಒಂದಲ್ಲ ಎರಡಲ್ಲ ಹತ್ತು ಹಲವು ಬಗೆಯ ತರಕಾರಿಗಳು ಈ ವ್ಯಕ್ತಿಯ ಮನೆಯಲ್ಲಿ ಬೆಳೆಯುತ್ತದೆ! ಮಣ್ಣಿಲ್ಲ, ರಾಸಾಯನಿಕಗಳ ಹಾವಳಿ ಇಲ್ಲ. ಮನೆಯ ಬಾಲ್ಕನಿ, ಕಿಟಕಿ , ತಾರಸಿ, ಎಲ್ಲಿ ನೋಡಿದರಲ್ಲಿ ಹಸಿ ಹಸಿ ತಾಜಾ ತಾಜಾ ತರಕಾರಿ. 3 ಅಂತಸ್ತಿನ ಮನೆಯಲ್ಲಿ ತರಕಾರಿ ಬೆಳೆಯುವ ಇವರ ವಾರ್ಷಿಕ ಆದಾಯ ಬರೋಬ್ಬರಿ 70 ಲಕ್ಷ ರೂ! ಇದು ಉತ್ತರ ಪ್ರದೇಶದ ಬರೇಲಿ ನಿವಾಸಿ […]

ಹಮೀದ್ ಅನ್ಸಾರಿ ಉಪರಾಷ್ಟ್ರಪತಿಯಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದೆ: ಪಾಕ್ ಪತ್ರಕರ್ತನ ಹೇಳಿಕೆಯಿಂದ ದೇಶದಲ್ಲಿ ಸಂಚಲನ

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ತನ್ನನ್ನು ಭಾರತಕ್ಕೆ ಆಹ್ವಾನಿಸುತ್ತಿದ್ದರು ಎಂಬ ಪಾಕ್ ಪತ್ರಕರ್ತನ ಹೇಳಿಕೆ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಯಿಂದ ದೇಶದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಹಮೀದ್ ಅನ್ಸಾರಿ ಉಪರಾಷ್ಟ್ರಪತಿಯಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದೆ ಮತ್ತು ಆ ಸಮಯದಲ್ಲಿ ಪಾಕಿಸ್ತಾನದ ಐಎಸ್‌ಐ ಜೊತೆ ಭಾರತಕ್ಕೆ ಸಂಬಂಧಿಸಿದ ಹಲವು ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದಾಗಿ ಪಾಕಿಸ್ತಾನಿ ಪತ್ರಕರ್ತರೊಬ್ಬರ ಸಂದರ್ಶನದಿಂದ ಈ ವಿವಾದ ಹುಟ್ಟಿಕೊಂಡಿದೆ. “ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು […]

ಉಡುಪಿ: ಅಗಲಿದ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಶೃದ್ಧಾಂಜಲಿ

ಉಡುಪಿ: ಡೆಂಗ್ಯು ಜ್ವರದಿಂದ ಭಾನುವಾರ ರಾತ್ರಿ‌ ಮೃತರಾದ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಉಡುಪಿ ಪತ್ರಕರ್ತರ ಸಂಘ, ಪ್ರೆಸ್‌ಕ್ಲಬ್ ವತಿಯಿಂದ ಬುಧವಾರ ಪ್ರೆಸ್‌ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತ ಶಶಿಧರ್ ಮಾಸ್ತಿಬೈಲು ಮಾತನಾಡಿ, ಪತ್ರಕರ್ತರು ತಮ್ಮ ಕೆಲಸದ ಜತೆಗೆ ಆರೋಗ್ಯದ ಬಗ್ಗೆಯು ಹೆಚ್ಚಿನ ಕಾಳಜಿ ವಹಿಸಬೇಕು. ಲವಲವಿಕೆಯ ವ್ಯಕ್ತಿತ್ವ, ಉತ್ತಮ ವಿಡಿಯೋ ಜರ್ನಲಿಸ್ಟ್ ಆಗಿದ್ದ ನಾಗೇಶ್ ಪಡು ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಆಶಿಸಿದರು. ನಾಗೇಶ್ ಅವರ ಭಾವಚಿತ್ರಕ್ಕೆ ಪತ್ರಕರ್ತರು ಪುಷ್ಪ ನಮನ ಸಲ್ಲಿಸಿ […]

ಅಗಲಿದ ಪತ್ರಕರ್ತ ನಾಗೇಶ್ ಪಡು ಅವರಿಗೆ ಸಂಘದಿಂದ ನುಡಿ ನಮನ

ಮಂಗಳೂರು: ಡೆಂಗ್ಯೂ ಜ್ವರದಿಂದ ಭಾನುವಾರ ರಾತ್ರಿ ಸಾವನ್ನಪ್ಪಿದ ಖಾಸಗಿ ಸುದ್ದಿವಾಹಿನಿಯ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ನಡೆದ ಸಭೆಯಲ್ಲಿ ಅಗಲಿದ ನಾಗೇಶ್ ಅವರಿಗೆ ಪತ್ರಕರ್ತರು ನುಡಿನಮನ ಸಲ್ಲಿಸಿದರು. ಮೌನಪ್ರಾರ್ಥನೆ ಸಲ್ಲಿಸಿ ಅಗಲಿದ ಆತ್ಮಕ್ಕೆ ಸದ್ಗತಿ ಕೋರಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ  ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಸದಾ […]

ಮಂಗಳೂರು: ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.1ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ‘ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ೨೦೧೯’ರ ಆಮಂತ್ರಣ ಪತ್ರಿಕೆ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಪತ್ರಿಕಾ ಬರವಣಿಗೆ ಮೂಲಕ ನಾಡನ್ನು ತಿದ್ದುವ, ಜನರಲ್ಲಿ ತಿಳಿವಳಿಕೆ ಮೂಡಿಸುವ ಪತ್ರಕರ್ತರಿಗೆ ಇಂದು ರಕ್ಷಣೆ ಬೇಕಾಗಿದೆ. ಒಳ್ಳೆಯ ವಿಚಾರವನ್ನು ಸಮಾಜದ ಮುಂದಿಡುವ ಜತೆಗೆ […]