ಸಾಣೂರು ಯುವಕ ಮಂಡಲದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಕಾರ್ಕಳ: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ‘ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮ’ ಅಂಗವಾಗಿ ಸಾಣೂರು ಗ್ರಾಮದ ಯುವಕರಿಗೆ ಯುವಕ ಮಂಡಲದ ಮೈದಾನದಲ್ಲಿ ಭಾನುವಾರ ಕಬಡ್ಡಿ ಪಂದ್ಯಾಟ ಹಮ್ಮಿಕೊಳ್ಳಲಾಯಿತು. ಜಿಪಂ ಸದಸ್ಯೆ ದಿವ್ಯಶ್ರೀ ಗಿರೀಶ್ ಅಮೀನ್ ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು. ಸಾಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಸಾಮಾಜಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ಪ್ರಕಾಶ್ ಮಡಿವಾಳ ಶಂಕರ್ […]