ಕಚ್ಚೂರು ದೇವಸ್ಥಾನವನ್ನು ಶೈಕ್ಷಣಿಕ ಕೇಂದ್ರವಾಗಿಸುವ ಪ್ರಯತ್ನ: ಡಿ.ವಿ. ಸದಾನಂದ ಗೌಡ

ಬ್ರಹ್ಮಾವರ: ಕಚ್ಚೂರು ದೇವಸ್ಥಾನವನ್ನು ಶೈಕ್ಷಣಿಕ ಕೇಂದ್ರವಾಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಶಿಕ್ಷಣ ಸಂಸ್ಥೆ ಮಂಜೂರಾತಿಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ರವಿವಾರ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ವಾರ್ಷಿಕ ಉತ್ಸವ ಸಂದರ್ಭ ಧಾರ್ಮಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ 10 ಎಕರೆ ಜಾಗ ಮಂಜೂರಿಗೆ ಪ್ರಯತ್ನಿಸುತ್ತೇನೆ.ಈ ಕುರಿತು ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದರು. […]