ಜ.15ರಿಂದ 21: ಶ್ರೀ ಕ್ಷೇತ್ರ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದಲ್ಲಿ ಅದ್ಧೂರಿ ಬ್ರಹ್ಮಕಲಶೋತ್ಸವ

ಬ್ರಹ್ಮಾವರ: ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರದಲ್ಲಿ ಜನವರಿ 15ರಿಂದ 21ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥ ಸಮರ್ಪಣೆ, ರಥೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ . ಜನವರಿ 15 ಮತ್ತು 16 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ವಿಶೇಷ: ಜ. 17ರಂದು ಬೆಳಿಗ್ಗೆ ಸಾಮೂಹಿಕ ಆಶ್ಲೇಷಬಲಿ, ನೂತನ ರಥ ಸಮರ್ಪಣೆ, ಅಪರಾಹ್ನ 2 ರಿಂದ ಉಡುಪಿ ಜೋಡುಕಟ್ಟೆಯಿಂದ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ಜರಗಲಿದೆ. ಸಂಜೆ ಶಾಸಕ ಹಾಲಾಡಿ ಶ್ರೀನಿವಾಸ್ […]