ಕಡಿಯಾಳಿ ತಿರುಗುವ ಮುಚ್ಚಿಗೆ ಖ್ಯಾತಿಯ ಕಾಷ್ಟಶಿಲ್ಪಿ ಸುದರ್ಶನ ಆಚಾರ್ಯರಿಗೆ ಕಾಷ್ಟಶಿಲ್ಪರತ್ನ ಪ್ರಶಸ್ತಿ

ಉಡುಪಿ: ಬೆಂಗಳೂರಿನ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ಯಲಹಂಕ ಇದರ ದಶಮಾನೋತ್ಸವದ ಪ್ರಯುಕ್ತ ನವೆಂಬರ್ 6 ರವಿವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಭವನ ಯಲಹಂಕದಲ್ಲಿ “ವಿಕಾಸ ಸಂಭ್ರಮ-2022” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಸ್ಥೆಯು ನೀಡುವ ಕಾಷ್ಠಶಿಲ್ಪರತ್ನ ಪ್ರಶಸ್ತಿಗೆ ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆ ನಿರ್ಮಾತೃ ಖ್ಯಾತ ಕಾಷ್ಠಶಿಲ್ಪಿ, ರಥ ಶಿಲ್ಪಿ ಸುದರ್ಶನ ಆಚಾರ್ಯ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಕಾಷ್ಠಶಿಲ್ಪದಲ್ಲಿ ವಿಶೇಷ ಸಾಧನೆ ಮಾಡಿದ ಶಿಲ್ಪಿ ಚಂದ್ರಯ್ಯ ಆಚಾರ್ಯ ಕಳಿ, ಶಿಲ್ಪಿ ರಾಜಗೋಪಾಲ್ ಆಚಾರ್ಯ ಕೋಟೇಶ್ವರ, ಶಿಲ್ಪಿ ಹರೀಶ್ ಆಚಾರ್ಯ ಕಲ್ಲಮುಂಡ್ಕೂರು, ಬಂಬ್ರಾಣ ಯಜ್ಞೇಶ್ ಆಚಾರ್ಯ […]

ಕಡಿಯಾಳಿ ತಿರುಗುವ ಮುಚ್ಚಿಗೆ ನಿರ್ಮಾತೃ-ಖ್ಯಾತ ಕಾಷ್ಠ ಶಿಲ್ಪಿ ಸುದರ್ಶನ ಆಚಾರ್ಯ ಇವರಿಗೆ  ಎಸ್.ಕೆ.ಜಿ.ಐ- ಫಾಲ್ಕೆ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಇವರು ವಿಶ್ವಕರ್ಮರ ಸಾಂಪ್ರದಾಯಿಕ ಪಂಚವೃತ್ತಿಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕುಶಲ ಕರ್ಮಿಗಳನ್ನು ಗುರುತಿಸಿ ಗೌರವಿಸಲು ನೀಡುವ ‘ಎಸ್.ಕೆ.ಜಿ.ಐ-ಫಾಲ್ಕೆ ಪ್ರಶಸ್ತಿ’ ಗೆ ಕಡಿಯಾಳಿ ತಿರುಗುವ ಮುಚ್ಚಿಗೆಯ ನಿರ್ಮಾತೃ ಕಾಷ್ಠ ಶಿಲ್ಪಿ  ಸುದರ್ಶನ ಆಚಾರ್ಯ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಸ್ವರ್ಣ ಶಿಲ್ಪ ಕ್ಷೇತ್ರದ ಸಾಧನೆಗಾಗಿ ಎಂ.ಸುಧಾಮ‌ ಆಚಾರ್ಯ ಮಂಗಳೂರು, ಎರಕ ಶಿಲ್ಪಿ ನಾಗೇಶ್ ಆಚಾರ್ಯ ಶಂಕರಪುರ, ಆಯಸ್ ಶಿಲ್ಪಿ ಗೋಪಾಲ‌ ಆಚಾರ್ಯ ಪುತ್ತೂರು ಮತ್ತು ಶಿಲಾ ಶಿಲ್ಪ ಕ್ಷೇತ್ರದ ವಿಶೇಷ ಸಾಧನೆಗೈದ […]

ಇತಿಹಾಸ ಪ್ರಸಿದ್ದ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಉಡುಪಿಯ 1500 ವರ್ಷಗಳ ಇತಿಹಾಸ ಹೊಂದಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ , ಎಸ್. ಸುನಿಲ್ ಕುಮಾರ್ , ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಕಡಿಯಾಳಿ ದೇಗುಲದಲ್ಲಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ” ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ

ಉಡುಪಿ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಾ. ವಿದ್ಯಾಭೂಷಣ ಕಂಠಸಿರಿಯಲ್ಲಿ ಹೊರಬಂದಿರುವ ಜಗನ್ಮಾತೆ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ “ಎಂಬ ಹಾಡಿನ ಗುಚ್ಛಗಳನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಯೂಟ್ಯೂನಲ್ಲಿ ಬಿಡುಗಡೆ ಮಾಡಲಾಯಿತು. ಶಾಸಕ ಕೆ ರಘುಪತಿ ಭಟ್ ಹಾಡನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ನಿತ್ಯಾನಂದ ಕಾಮತ್, […]

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕಡಿಯಾಳಿ ದೇಗುಲದಲ್ಲಿ ಸಾಮೂಹಿಕ ರಾಮತಾರಕ ಮಂತ್ರ ಜಪಪಠಣ 

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಕಡಿಯಾಳಿಯ ಮಹಿಷಮರ್ಧಿನಿ ದೇವಸ್ಥಾನದ ಕಾತ್ಯಾಯಿನಿ ಮಂಟಪದಲ್ಲಿ ಮಂಗಳವಾರ ಸಾಮೂಹಿಕ ರಾಮತಾರಕ ಮಂತ್ರ ಜಪಪಠಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹನುಮಾನ್ ಚಾಲೀಸ್ ಪಠಣ, ಶ್ರೀರಾಮ ಸಂಕೀರ್ತನೆ ನಡೆಯಿತು. ರಾಮದೇವರ ಪ್ರತಿಷ್ಠೆ, ಗಣಹೋಮ ಜರುಗಿತು. ಬಳಿಕ ನಡೆದ ಧಾರ್ಮಿಕ ಸಭಾಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದು ಪರಿಷತ್ ದಕ್ಷಿಣ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ರಾಮಮಂದಿರ ಭಾರತ ದೇಶದ ಪರಂಪರೆಯ ಪ್ರತೀಕ. ಹಾಗಾಗಿ ಧಾರ್ಮಿಕ ಅನುಷ್ಠಾನಗಳ ಮೂಲಕ ರಾಮಮಂದಿರ […]