ಕಳತ್ತೂರು: ವಿಶ್ವ ಬಂಟರ ಪ್ರತಿಷ್ಠಾನ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಂಟ ಮಹಿಳೆಯರಿಗೆ ಮನೆ ನಿರ್ಮಾಣ

ಕಳತ್ತೂರು: ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಆಡಳಿತ ನಿರ್ದೇಶಕ ಶಶಿಕಿರಣ್ ಶೆಟ್ಟಿ ಇವರು ಮಂಗಳೂರಿನ ಉದ್ಯಮಿ ಎ.ಜೆ.ಶೆಟ್ಟಿ ಅಧ್ಯಕ್ಷತೆಯ ವಿಶ್ವ ಬಂಟರ ಪ್ರತಿಷ್ಠಾನಕ್ಕೆ 8 ಲಕ್ಷ ರೂ ಆರ್ಥಿಕ ಸಹಾಯ ನೀಡಿದ್ದು, ಆ ಮೂಲಕ ಆರ್ಥಿಕವಾಗಿ ಹಿಂದುಳಿದ ಬಂಟ ಮಹಿಳೆಯರಿಗೆ ಮನೆ ನಿರ್ಮಿಸಿಕೊಡಲಾಗಿದೆ. ಒಟ್ಟು 17 ಮನೆ ನಿರ್ಮಾಣಗೊಂಡಿದ್ದು ಅದರಲ್ಲಿ ಕಾಸರಗೋಡಿನಲ್ಲಿ 7, ಮಂಗಳೂರಿನಲ್ಲಿ 5, ಕುಂದಾಪುರದಲ್ಲಿ 1 ಹಾಗೂ ಕಾಪು ತಾಲೂಕಿನ ಕಳತ್ತೂರು ಗ್ರಾಮದಲ್ಲಿ 4 ಮನೆಗಳನ್ನು ನಿರ್ಮಿಸಲಾಗಿದೆ. ಮಂಗಳೂರಿನಲ್ಲಿ ನಡೆದ ವಿಶ್ವ ಬಂಟರ ಪ್ರತಿಷ್ಠಾನ […]

ಕಳತ್ತೂರು: ಕಾಂಗ್ರೆಸ್ ವಾರ್ಡ್ ಕಾರ್ಯಕರ್ತರ ಸಭೆ

ಕಳತ್ತೂರು: ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕಳತ್ತೂರು 2ನೇ ವಾರ್ಡಿನ ಕಾರ್ಯಕರ್ತರ ಸಭೆಯು ಚಂದ್ರನಗರ ಬಟರ್ ಫ್ಲೈ ಗೆಸ್ಟ್ ಹೌಸ್ ಪಾರ್ಟಿಹಾಲ್ ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಹೆಸರನ್ನು ಮತ ಪಟ್ಟಿಯಿಂದ ತೆಗೆದು ಹಾಕುವ ಹುನ್ನಾರವಿದ್ದು ಕಾರ್ಯಕರ್ತರನ್ನು ತಮ್ಮ ಹಕ್ಕಿನಿಂದ ವಂಚಿಸಲು ನೋಡಲಾಗುತ್ತಿದೆ. ಇದಕ್ಕೆ ಬಿಜೆಪಿ […]

ಕಳತ್ತೂರು: ಸಮಾಜ ಸೇವಕರಿಂದ ಆರೋಗ್ಯ ಕೇಂದ್ರಕ್ಕೆ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆ

ಕಾಪು : ಸಮಾಜ ಸೇವಾ ಕ್ಷೇತ್ರದಲ್ಲಿ ರಾಷ್ಟೀಯ ಪ್ರಶಸ್ತಿ ಪುರಸ್ಕೃತರಾದ ಕಾಪು ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮೊಹಮ್ಮದ್ ಫಾರೂಕ್, ಚಂದ್ರನಗರದ ಜನಸಂಪರ್ಕ ಜನಸೇವಾ ವೇದಿಕೆಯ ಅಧ್ಯಕ್ಷ ದಿವಾಕರ ಬಿ ಶೆಟ್ಟಿ ಕಳತ್ತೂರು, ಉಭಯ ವೇದಿಕೆ ಸಂಚಾಲರಾದ ದಿವಾಕರ ಡಿ. ಶೆಟ್ಟಿ ಕಳತ್ತೂರು ಇವರು ತಮ್ಮ ವೈಯಕ್ತಿಕ ನೆಲೆಯಲ್ಲಿ ಕಳತ್ತೂರಿನಲ್ಲಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಉಪ ಕೇಂದ್ರಕ್ಕೆ 1000 ಲೀಟರ್ ನ ಕುಡಿಯುವ ನೀರಿನ ಟ್ಯಾಂಕ್ ಅನ್ನು ಕೊಡುಗೆಯಾಗಿ ಹಸ್ತಾಂತರಿಸಿದರು. ಆರೋಗ್ಯ ಸುರಕ್ಷಾಧಿಕಾರಿ ಸುಧಾವತಿ […]