ರಿಷಬ್ ಶೆಟ್ಟಿ ಹೊಸ ಹೆಜ್ಜೆ “ಕೆರಾಡಿ ಸ್ಟುಡಿಯೋಸ್” ಸ್ಥಾಪನೆ: ಚಿತ್ರಗಳ ಮಾರ್ಕೆಂಟಿಗ್ ಗಾಗಿ ಹೊಸ ವೇದಿಕೆ

ಚಿತನಟ, ನಿರ್ದೇಶಕ ರಿಷಬ್ ಶೆಟ್ಟಿ ಹೊಸ ಹೆಜ್ಜೆ, ಹೊಸ ಕನಸೊಂದನ್ನು ನನಸಾಗಿಸಿದ್ದು, ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳಿಗಾಗಿ “ಕೆರಾಡಿ ಸ್ಟುಡಿಯೋಸ್” ಅನ್ನು ಸ್ಥಾಪಿಸಿದ್ದಾರೆ. ಚಿತ್ರದ ಗೆಲುವಿಗೆ ನಿರ್ಮಾಣದಷ್ಟೇ ಪ್ರಚಾರವೂ ಅತ್ಯಗತ್ಯವಾಗಿದ್ದು, ತಾವು ಹುಟ್ಟಿ ಬೆಳೆದ ಊರಾದ ಕುಂದಾಪುರದ ಸಣ್ಣ ಹಳ್ಳಿ ‘ಕೆರಾಡಿ’ಯ ಹೆಸರಿನಲ್ಲಿ ಸಂಸ್ಥೆಯನ್ನು ಸ್ಥಾಪಿಸಿದಾರೆ. ತಮ್ಮ ಹೊಸ ಪ್ರಯತ್ನಕ್ಕೆ ಚಿತ್ರರಸಿಕರ ಬೆಂಬಲವನ್ನು ಅವರು ಕೋರಿದ್ದಾರೆ.  

ಐ.ಎಮ್.ಡಿ.ಬಿ ಟಾಪ್ 10 ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳ ಪಟ್ಟಿಯಲ್ಲಿ ಮೂರು ಕನ್ನಡದ ಚಿತ್ರಗಳು: ಚಾರ್ಲಿ777, ಕಾಂತಾರ, ಕೆ.ಜಿ.ಎಫ್ ಚಾಪ್ಟರ್-2

2022 ರ ಟಾಪ್ 10 ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಐ.ಎಮ್.ಡಿ.ಬಿ ಪ್ರಸ್ತುತಪಡಿಸಿದೆ. ಇಂಟರ್ನೆಟ್ ಚಲನಚಿತ್ರ ಡೇಟಾಬೇಸ್ ಪ್ರಕಾರ ಜನವರಿ 1 ಮತ್ತು ನವೆಂಬರ್ 7, 2022 ರ ನಡುವೆ ಭಾರತದಲ್ಲಿ ಥಿಯೇಟರ್ ಗಳಲ್ಲಿ ಅಥವಾ ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾದ ಎಲ್ಲಾ ಚಲನಚಿತ್ರಗಳ ಪೈಕಿ ಕನಿಷ್ಠ 25,000 ಮತಗಳೊಂದಿಗೆ ಸರಾಸರಿ 7 ಅಥವಾ ಹೆಚ್ಚಿನ ಐ.ಎಮ್.ಡಿ.ಬಿ ಬಳಕೆದಾರರ ರೇಟಿಂಗ್ ಅನ್ನು ಹೊಂದಿರುವ ಚಿತ್ರಗಳಲ್ಲಿ 10 ಚಲನಚಿತ್ರಗಳು ಜನಪ್ರಿಯತೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡಿವೆ. ಈ 10 ಚಿತ್ರಗಳ ಪೈಕಿ […]

ಬಾಲಿವುಡ್ ಬೇಡ ಕನ್ನಡ ಮಾತ್ರ ಸಾಕು; ಕನ್ನಡ ನನ್ನ ಕರ್ಮಭೂಮಿ: ರಿಷಭ್ ಶೆಟ್ಟಿ

ಟೈಮ್ಸ್ ನೌ ಶೃಂಗಸಭೆ 2022 ರಲ್ಲಿ ಹಿಂದಿ ಚಿತ್ರ ನಟ ಅನುಪಮ್ ಖೇರ್, ಕನ್ನಡ ನಟ ರಿಷಭ್ ಶೆಟ್ಟಿ ನಡುವೆ ಲೇಖಕ ಚೇತನ್ ಭಗತ್ ಸಂವಾದವೇರ್ಪಡಿಸಿದ್ದಾರೆ. ಟೈಮ್ಸ್ ನೌ ಶೃಂಗಸಭೆಯ ಹಿಂದಿನ ಆವೃತ್ತಿಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಪಿಯೂಷ್ ಗೋಯಲ್, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಪೀಟರ್ ಝೈಹಾನ್, ಕೆ ಶಿವನ್ ಮತ್ತು ಶ್ರೀ ರವಿಶಂಕರ್ ಮುಂತಾದವರು ಭಾಗವಹಿಸಿದ್ದಾರೆ. ಈ ಬರಿ ಹಿಂದಿ ಚಿತ್ರನಟ […]

ಕನ್ನಡದ ಬಗ್ಗೆ ಅಗೌರವದ ವರ್ತನೆ: ರಶ್ಮಿಕಾ ಮಂದಣ್ಣ ಸಿನಿಮಾ ನಿಷೇಧಕ್ಕೆ ಕನ್ನಡ ಚಿತ್ರರಂಗ ಚಿಂತನೆ?

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ನಿರಂತರವಾಗಿ ಕನ್ನಡ ಮತ್ತು ಕನ್ನಡಿಗರಿಗೆ ಅಗೌರವ ತೋರುತ್ತಿರುವುದರಿಂದ ಅವರ ಚಲನಚಿತ್ರಗಳನ್ನು ಕರ್ನಾಟಕದಿಂದ ಶಾಶ್ವತವಾಗಿ ನಿಷೇಧಿಸಲು ಕನ್ನಡ ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳು, ಥಿಯೇಟರ್ ಮಾಲೀಕರು ಮತ್ತು ಕನ್ನಡ ಚಿತ್ರ ಮಂಡಳಿಯ ನಡುವೆ ಈ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಬಾಕ್ಸ್ ಆಫೀಸ್ ಸೌತ್ ಇಂಡಿಯನ್ ಟ್ವೀಟ್ ಮಾಡಿದೆ. ಇದು ಇದೇ ರೀತಿ ಮುಂದುವರಿದಲ್ಲಿ ಪುಷ್ಪ2 ಕರ್ನಾಟಕದ ಯಾವುದೇ ಭಾಗದಲ್ಲಿ ಬಿಡುಗಡೆಯಾಗುವುದಿಲ್ಲ. ಇದರಿಂದ ನಿರ್ಮಾಪಕರಿಗೆ ಮತ್ತು ಕರ್ನಾಟಕದ ಅಲ್ಲು ಅರ್ಜುನ್ […]

ಕಾಲನ ಜೊತೆ ಜಿದ್ದಿಗೆ ಬಿದ್ದು ಕಾಲನಲ್ಲಿ ಲೀನರಾನ ಮಹಾನ್ ಚೇತನ ಶಂಕರ್ ನಾಗ್ ರವರ 68 ನೇ ಜನ್ಮ ದಿನ

ಇವತ್ತು ಕನ್ನಡ ಚಿತ್ರರಂಗದ ಯಶಸ್ಸನ್ನು ಕಂಡಾಗ ಪ್ರತಿಯೊಬ್ಬರ ಮನಸ್ಸಿನಲ್ಲೂ ಮೂಡುವ ವಿಚಾರ ಶಂಕರ್ ನಾಗ್ ಇದ್ದಿದ್ದರೆ ಈ ಯಶಸ್ಸು ಯಾವತ್ತೋ ಬಂದಿರುತ್ತಿತ್ತು. ಶಂಕರ್ ನಾಗ್ ಬರಿಯ ವ್ಯಕ್ತಿಯಲ್ಲ, ಅವರೊಂದು ಶಕ್ತಿ. ಅದಮ್ಯ ಚೈತನ್ಯ, ಎಂದಿಗೂ ಬತ್ತದ ಉತ್ಸಾಹ, ಕಾಲಕ್ಕಿಂತ ಒಂದು ಹೆಜ್ಜೆ ಮುಂದಿರಬೇಕೆನ್ನುವ ತುಡಿತ. ಕಾಲನ ಜೊತೆ ಜಿದ್ದಿಗೆ ಬಿದ್ದು ಕಾಲನಲ್ಲಿ ಲೀನರಾಗಿ 32 ವರ್ಷಗಳು ಸಂದರೂ ಶಂಕರ್ ನಾಗ್ ನೆನಪು ಎಳ್ಳಷ್ಟೂ ಮಾಸಿಲ್ಲ. ಅವರಿಂದು ನಮ್ಮ ಜೊತೆಗಿರುತ್ತಿದ್ದರೆ ಅವರಿಗೆ 68 ವರ್ಷ ತುಂಬುತ್ತಿತ್ತು. ಇಷ್ಟು ವರ್ಷಗಳಲ್ಲಿ […]