ಚಿತ್ರಗಳಲ್ಲಡಗಿದೆ ಕನ್ನಡದ ಅಕ್ಷರಮಾಲೆ: ಸೃಜನಶೀಲ ಕಲಿಕಾ ವಿಧಾನ ಎಂದ ಪ್ರಧಾನಿ ಮೋದಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಕನ್ನಡಿಗರಲ್ಲೇ ನಿರುತ್ಸಾಹ ಕಂಡುಬರುತ್ತಿದೆ. ಚಿಕ್ಕ ಮಕ್ಕಳಿಗಂತೂ ಇವತ್ತು ಕನ್ನಡವೆಂದರೆ ಕಬ್ಬಿಣದ ಕಡಲೆಯಂತಾಗಿದೆ. ಇಂಗ್ಲೀಷ್ ಭಾಷಾ ವ್ಯಾಮೋಹದಿಂದಾಗಿ ಕನ್ನಡ ನಿರಂತರ ಸೊರಗುತ್ತಿದೆ. ಈ ಮಧ್ಯೆ ಟ್ವಿಟರ್ ನಲ್ಲಿ ಬಳಕೆದಾರರೊಬ್ಬರು ವಿನೂತನ ವಿಧಾನದಲ್ಲಿ ಕನ್ನಡದ ಅಕ್ಷರಮಾಲೆಯನ್ನು ಕಲಿಸಬಹುದಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ” 49 ರಲ್ಲಿ 46 ಅಕ್ಷರಗಳು ಚಿತ್ರಗಳ ಸುಳಿವುಗಳನ್ನು ಹೊಂದಿವೆ. ಮಕ್ಕಳಿಗೆ ಕನ್ನಡ ವರ್ಣಮಾಲೆಗಳನ್ನು ಕಲಿಸುವ ಅದ್ಭುತ ವಿಧಾನ. (ಆದರೂ ನನಗೆ ಇದರ ರಚನಕಾರರು ಗೊತ್ತಿಲ್ಲ) ನೀವು ಎಷ್ಟನ್ನು ಊಹಿಸಬಹುದು? […]

ಕಾಸರಗೋಡು: ಬೇಳದಲ್ಲಿ ಕವಿತಾ ಟ್ರಸ್ಟ್ ವತಿಯಿಂದ 17ನೇ ಕವಿತಾ ಫೆಸ್ತ್ ಆಯೋಜನೆ

ಕಾಸರಗೋಡು: ಕವಿತಾ ಟ್ರಸ್ಟ್ ವತಿಯಿಂದ ವರ್ಷಂಪ್ರತಿ ನಡೆಯುವ ‘ಕವಿತಾ ಫೆಸ್ತ್’ ಈ ಬಾರಿ ಕಾಸರಗೋಡು ಜಿಲ್ಲೆಯ ಬೇಳದಲ್ಲಿ ಜನವರಿ 8 ಭಾನುವಾರದಂದು ಅದ್ದೂರಿಯಾಗಿ ನಡೆಯಿತು. ದಿನಪೂರ್ತಿ ನಡೆದ ಕಾರ್ಯಕ್ರಮನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಿದರು. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ, ಗೋವಾ ಇದರ ಅಧ್ಯಕ್ಷ ಅನ್ವೇಶ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ […]

ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯಲು ಅನುಮತಿ: ಉನ್ನತ ಶಿಕ್ಷಣ ಇಲಾಖೆ

ಬೆಂಗಳೂರು: ಕರ್ನಾಟಕ ಉನ್ನತ ಶಿಕ್ಷಣ ಮಂಡಳಿಯು ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಬರೆಯಲು ಅನುಮತಿ ನೀಡಿದೆ. ಡಿಸೆಂಬರ್ 14 ರಂದು ನಡೆದ ಕೌನ್ಸಿಲ್ನ 23 ನೇ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥನಾರಾಯಣ್ ವಹಿಸಿದ್ದರು. ಇಲ್ಲಿಯವರೆಗೆ ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳಿಗೆ ಕನ್ನಡ ಅಥವಾ ಇಂಗ್ಲಿಷ್‌ ಯಾವುದಾದರೂ ಒಂದು ಭಾಷೆಯಲ್ಲಿ ಉತ್ತರಗಳನ್ನು ಬರೆಯಬಹುದಿತ್ತು.ಆದಾಗ್ಯೂ, ಹೊಸ ನಿರ್ಧಾರವು ವಿದ್ಯಾರ್ಥಿಗಳು […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರಗೋಷ್ಠಿ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರಿನ ಅತಿಥಿ ಉಪನ್ಯಾಸಕ ಎಸ್. ಮಣಿಕಂಠ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಕನ್ನಡ ನಾಡು-ನುಡಿಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಕನ್ನಡ ನೆಲ, ಜಲ, ಸಂಸ್ಕೃತಿ, ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲ, ಬೋಧಕ- ಬೋಧಕೇತರ […]

ಸರಕಾರಿ ಕಚೇರಿಗಳಲ್ಲಿ ನೂರಕ್ಕೆ ನೂರರಷ್ಟು ಕನ್ನಡಾನುಷ್ಠಾನ ಕಡ್ಡಾಯ: ಡಾ.ಟಿ.ಎಸ್.ನಾಗಾಭರಣ

ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಹೇಳಿದರು. ಅವರು ಮಂಗಳವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]