ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿಲ್ಲ: ನಿರೂಪಕಿ ಅನುಶ್ರೀ ಕಣ್ಣೀರು

ಮಂಗಳೂರು: ನನ್ನನ್ನು ಬೆಳೆಸಿದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ. ವಿಡಿಯೊ ಹೇಳಿಕೆ ಮೂಲಕ ತನಗಾದ ನೋವನ್ನು ಹಂಚಿಕೊಂಡಿದ್ದಾರೆ. ಸೆ. 24 ರಂದು ನನ್ನ ಪಾಲಿನ ಕರಾಳ ದಿನ. ಆ ದಿನವನ್ನು ನನ್ನ ಜೀವನದ ಯಾವ ಘಟ್ಟದಲ್ಲೂ ನೆನಪಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಭಾವುಕರಾಗಿ ನುಡಿದಿದ್ದಾರೆ. ಸಿಸಿಬಿ ವಿಚಾರಣೆಗೆ ಕರೆದಿರುವುದಕ್ಕೆ ಬೇಸರವಿಲ್ಲ. ಆದರೆ, ಅದರ ನಂತರ ಆರಂಭವಾಗಿರುವ ಅಂತೆ ಕಂತೆಗಳಿಂದ ನನ್ನ ಕುಟುಂಬಕ್ಕೆ ಸಾಕಷ್ಟು ನೋವಾಗಿದೆ ಎಂದು […]