2024 ರಲ್ಲಿ ಬರಲಿದೆ ಕಾಂತಾರ ಭಾಗ-1: ಪ್ರೀಕ್ವೆಲ್ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ

ಬಹುಚರ್ಚಿತ ಮತ್ತು ವಿಶ್ವದಾದ್ಯಂತ ಜನಮನ್ನಣೆ ಗಳಿಸಿದ ಕಾಂತಾರ ಚಿತ್ರವು ಯಶಸ್ವಿ ನೂರು ದಿನಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಕಾಂತಾರದ ಪೂರ್ವಾಭಾವಿ ಕಥೆಯನ್ನೊಳಗೊಂಡ ಕಾಂತಾರ ಪ್ರೀಕ್ವಲ್ ಅನ್ನು 2024ರಲ್ಲಿ ತೆರೆಗೆ ತರಲಿರುವುದಾಗಿ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಥಿಯೇಟರ್‌ಗಳಲ್ಲಿ “ಕಾಂತಾರ”ದ ಶತದಿನೋತ್ಸವವನ್ನು ಆಚರಿಸಲು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಷಬ್ ಬಹು ನಿರೀಕ್ಷಿತ ಚಿತ್ರದ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಕಾಂತಾರ ಚಿತ್ರಕ್ಕೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ತೋರಿಸಿದ ಪ್ರೇಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಾವು ತುಂಬಾ ಸಂತೋಷದಲ್ಲಿದ್ದೇವೆ. ದೈವದ ಆಶೀರ್ವಾದದಿಂದ […]

ವಿವೇಕ್ ಅಗ್ನಿಹೋತ್ರಿಯ ‘ದ ವ್ಯಾಕ್ಸೀನ್ ವಾರ್’ ನಲ್ಲಿ ಕಾಂತಾರ ಬೆಡಗಿ ಸಪ್ತಮಿಗೌಡ

ಮುಂಬಯಿ: ಕನ್ನಡ ಚಿತ್ರನಟಿ ಕಾಂತಾರ ಬೆಡಗಿ ಸಪ್ತಮಿಗೌಡ ಹಿಂದಿ ಚಿತ್ರಲೋಕದತ್ತ ಪಯಣ ಬೆಳೆಸಿದ್ದಾರೆ. ಕಾಶ್ಮೀರ್ ಫೈಲ್ಸ್ ಚಿತ್ರ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿಯ ಮುಂಬರುವ ಚಿತ್ರ “ವ್ಯಾಕ್ಸೀನ್ ವಾರ್” ನಲ್ಲಿ ಪ್ರಮುಖ ಪಾತ್ರದಲ್ಲಿ ಸಪ್ತಮಿ ನಟಿಸಲಿದ್ದಾರೆ. ಈ ಬಗ್ಗೆ ನಿರ್ದೇಶಕ ವಿವೇಕ್ ರಂಜನ್ ಟ್ವೀಟ್ ಮಾಡಿದ್ದು, “ಸುಸ್ವಾಗತ ಸಪ್ತಮಿ ಗೌಡ, ದ ವ್ಯಾಕ್ಸೀನ್ ವಾರ್ ನ ನಿಮ್ಮ ಪಾತ್ರವು ಎಲ್ಲರ ಹೃದಯಗಳನ್ನು ಗೆಲ್ಲಲಿದೆ” ಎಂದಿದ್ದಾರೆ. ಚಿತ್ರದ ಬಗ್ಗೆ ಹರ್ಷಾತುರರಾಗಿರುವ ಸಪ್ತಮಿ ಚಿತ್ರದಲ್ಲಿ ನೀಡಿರುವ ಅವಕಾಶಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ. […]

ಆಸ್ಕರ್ ನತ್ತ ಕಾಂತಾರ: ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳ ಸ್ಪರ್ಧಾ ಪಟ್ಟಿಯಲ್ಲಿ ಸ್ಥಾನ

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಹೊಂಬಾಳೆ ಫಿಲ್ಮ್ಸ್ ನ ಕಾಂತಾರ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳಲ್ಲಿ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಯ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದರರ್ಥ, ಚಲನಚಿತ್ರವು ಮುಖ್ಯ ನಾಮನಿರ್ದೇಶನಗಳಿಗೆ ಆಯ್ಕೆಯಾಗಲು ಆಸ್ಕರ್ ಸದಸ್ಯರು ಮತ ಚಲಾಯಿಸಲು ಅರ್ಹವಾಗಿದೆ. ಕಾಂತಾರ ಆಸ್ಕರ್‌ ರೇಸ್‌ಗೆ ತಡವಾಗಿ ಪ್ರವೇಶ ಪಡೆದಿದೆ. ಇದರೊಂದಿಗೆ ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಮತ್ತು ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರಗಳು ತಮ್ಮ ಆಸ್ಕರ್ ಪ್ರಯಾಣವನ್ನು ಪ್ರಾರಂಭಿಸಿವೆ. ಕಾಂತಾರ ಅಂತಿಮ ನಾಮನಿರ್ದೇಶನಕ್ಕೆ […]

ಶತದಿನೋತ್ಸವ ಆಚರಿಸಿದ ಕಾಂತಾರ: ಅಂದು ಕಾಂತಾರದಲ್ಲಿ ಕೆರಾಡಿ; ಇಂದು ಕೆರಾಡಿಯಲ್ಲಿ ಕಾಂತಾರ

ತುಳುನಾಡಿನ ಸಂಸ್ಕೃತಿಯನ್ನು ಸಾರುವ ಕಾಂತಾರ ಚಲನಚಿತ್ರವು ಶತದಿನೋತ್ಸವವನ್ನು ಆಚರಿಸಿದೆ. ಈ ಬಗ್ಗೆ ಹೊಂಬಾಳೆ ಫಿಲಮ್ಸ್ ತನ್ನ ಸಂತಸವನ್ನು ಹಂಚಿಕೊಂಡಿದೆ. “ಬೆಳಕು ಆದರೆ ಇದು ಬೆಳಕಲ್ಲ100 ದಿನದ ದರ್ಶನ. ನಾವು ಯಾವಾಗಲೂ ಗೌರವಿಸುವ ಚಲನಚಿತ್ರವು ನಮ್ಮನ್ನು ನಮ್ಮ ಮೂಲಕ್ಕೆ ಮರಳಿ ಕರೆದೊಯ್ದು ನಮ್ಮ ಸಂಪ್ರದಾಯಗಳ ಬಗ್ಗೆ ವಿಸ್ಮಯ ಪಡುವಂತೆ ಮಾಡಿತು. ಇದನ್ನು ಮಾಡಿದ ಎಲ್ಲರಿಗೂ ವಂದನೆಗಳು” ಎಂದು ಹೊಂಬಾಳೆ ಟ್ಬೀಟ್ ಮಾಡಿದೆ. ಏತನ್ಮಧ್ಯೆ, ಯಾವ ಕೆರಾಡಿಯೆಂಬ ಹಳ್ಳಿಯಲ್ಲಿ ಕಾಂತಾರ ಚಲನಚಿತ್ರವನ್ನು ಚಿತ್ರೀಕರಿಸಲಾಯಿತೋ ಅಲ್ಲಿ ಜ.8 ಭಾನುವಾರದಂದು ಕಾಂತಾರ ಚಲನಚಿತ್ರ […]

ಸಾಂತಾಕ್ಲಾಸ್ ವೇಷ ಧರಿಸಿ ಕಾಂತಾರ ಪಂಜುರ್ಲಿ ಆವೇಷದ ಅಣಕು: ಸಾರ್ವಜನಿಕರಿಂದ ಆಕ್ರೋಶ

ಉಡುಪಿ: ಕ್ರಿಸ್ಮಸ್ ಹಿನ್ನಲೆಯಲ್ಲಿ ಸಾಂತಾಕ್ಲಾಸ್ ವೇಷದಲ್ಲಿ ಮನೆಮನೆಗೆ ಭೇಟಿ ನೀಡಿ ಉಡುಗೊರೆಗಳನ್ನು ನೀಡುವುದು ಹಿಂದಿನ ಕಾಲದಿಂದಲೂ ವಾಡಿಕೆ. ಟರ್ಕಿಯ ಸೇಂಟ್ ನಿಕೋಲಸ್ ಎನ್ನುವ ಪಾದ್ರಿಯೊಬ್ಬರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಾ ಉಡುಗೊರೆಗಳನ್ನು ನೀಡುತ್ತಿದ್ದು ಅವರ ಹೆಸರು ನೆದರ್ಲ್ಯಾಂಡ್ಸ್ ದೇಶದಲ್ಲಿ ಸಿಂಟರ್ಕ್ಲಾಸ್ ಎಂದು ಅಪಭ್ರಂಶವಾಗಿ ಮುಂದೆ ಅಮೇರಿಕಾ ಮತ್ತು ಯೂರೋಪ್ ಗಳಲ್ಲಿ ಸಾಂಟಾಕ್ಲಾಸ್ ಎಂದು ಕರೆಯಲ್ಪಟ್ಟು ವಿಶ್ವಾದ್ಯಂತ ಪ್ರಸಿದ್ದವಾಯಿತು. ಸೇಂಟ್ ನಿಕೋಲಸ್ ನೆನಪಿಗಾಗಿ ಕ್ರಿಸ್ ಮಸ್ ಹಬ್ಬದಂದು ಸಾಂಟಾಕ್ಲಾಸ್ ವೇಷ ಧರಿಸಿ ಉಡುಗೊರೆ ನೀಡುವುದು ಎಲ್ಲೆಲ್ಲೂ ನಡೆಯುತ್ತಿದೆ. ಆದರೆ ಈ […]