ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಲಿಮಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ದೈವಸ್ಥಾನಗಳಿಗೆ ಭೇಟಿ

ಹಿರಿಯಡಕ: ಕಾಪು ವಿಧಾನಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಪಲಿಮಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ದೈವಸ್ಥಾನಗಳಿಗೆ ಭೇಟಿ ನೀಡಿದರು. ಪಲಿಮಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 183 ಬೂತಿನ ನಂದಿಕೂರು, ಪ್ರದೇಶದ, ಪಡುಕೆರೆ ನಂದಿಕೂರು ಕೊರ್ದಬ್ಬು ದೈವಸ್ಥಾನ ಹಾಗೂ ಅಡ್ವೆ ಅರಂತಡೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಮತಯಾಚಿಸಲಾಯಿತು.