ಜ್ಞಾನಸುಧಾದ 37 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ‍್ಯಾಂಕ್; ವಿಜ್ಞಾನ ವಿಭಾಗದ ಸಮ್ಯಕ್ ಪ್ರಭು ಹಾಗೂ ವಾಣಿಜ್ಯ ವಿಭಾಗದ ಚೈತ್ರ ಕಾಮತ್ ರಾಜ್ಯಮಟ್ಟದಲ್ಲಿ 4ನೇ ರ‍್ಯಾಂಕ್

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ ಸಾಲಿನ ದ್ವೀತೀಯ ಪಿಯುಸಿ ಪರೀಕ್ಷೆ -1ರ ಫಲಿತಾಶದಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯಕ್ಕೆ 10ರೊಳಗಿನ 37 ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (595/600) ಹಾಗೂ ವಾಣಿಜ್ಯ ವಿಭಾಗದಲ್ಲಿ ಚೈತ್ರ ಕಾಮತ್(594/600) ಅಂಕ ಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ ಒಟ್ಟು 689 ವಿದ್ಯಾರ್ಥಿಗಳಲ್ಲಿ 663 ವಿದ್ಯಾರ್ಥಿಗಳು […]

ಕಾರ್ಕಳ: ಮಾ.24 ರಂದು “ನಮಗಾಗಿ ಮೋದಿ” ರಾಷ್ಟ್ರ ಜಾಗೃತಿ ಸಮಾವೇಶ

ಕಾರ್ಕಳ: ಅಭಿನವ ಭಾರತ ಕಾರ್ಕಳ ಅರ್ಪಿಸುವ “ನಮಗಾಗಿ ಮೋದಿ” ರಾಷ್ಟ್ರ ಜಾಗೃತಿ ಸಮಾವೇಶವು ಹೋಟೆಲ್ ಬಾಲಾಜಿ ಇನ್ ಬಂಡಿ ಮಠ ಇಲ್ಲಿ ಮಾ. 24 ರಂದು ಸಂಜೆ 4 ಗಂಟೆಗೆ ನಡೆಯಲಿದ್ದು, ಹಿರಿಯ ಉದ್ಯಮಿ ಪ್ರಭಾಕರ ಕಾಮತ್ ಬೋಳ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ರಾಜಕೀಯ ವಿಶ್ಲೇಷಕ ಸುರಭಿ ಹೊದಿಗೆರೆ, ನಿವೃತ್ತ ವಾಯುಸೇನಾಧಿಕಾರಿ ವಿಂಗ್ ಕಮಾಂಡರ್ ಬಿ.ಎಸ್. ಸುದರ್ಶನ್, ಹಿರಿಯ ನ್ಯಾವಾದಿ ಎಂ.ಕೆ ವಿಜಯಕುಮಾರ್, ಪತ್ರಕರ್ತ ಸಂತೋಷ್ ತಮ್ಮಯ್ಯ ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಸನಾತನ ನಾಟ್ಯಾಲಯ ಮಂಗಳೂರು ಇವರಿಂದ […]

ಕಾರ್ಕಳ: ಹೊಟೇಲ್‌ ಕಟ್ಟಡದಲ್ಲಿ ಅಗ್ನಿ ಅವಘಡ; 1.20 ಲಕ್ಷ ರೂ ನಷ್ಟ

ಕಾರ್ಕಳ: ಕಸಬಾ ಗ್ರಾಮದ ಕರಿಯಕಲ್ಲು ಜಂಕ್ಷನ್‌ ಬಳಿ ನಿರ್ಮಲ ರಾವ್‌ ಮಾಲಕತ್ವದ ಹೊಟೇಲ್‌ ಕಟ್ಟಡಕ್ಕೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದ ಘಟನೆ ಮಾ.3ರಂದು ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದೆ. ಘಟನೆಯಿಂದ ಫ್ರಿಡ್ಜ್, ಗ್ರೈಂಡರ್, ಮಿಕ್ಸಿ, ಅಡುಗೆ ಪಾತ್ರೆ, ದಿನಸಿ ಸಾಮಗ್ರಿ, ವಿದ್ಯುತ್‌ ಸಂಪರ್ಕ ಇತ್ಯಾದಿ ಸುಟ್ಟು ಹೋಗಿವೆ. ಕಟ್ಟಡದ ಮೇಲ್ಛಾವಣಿ ಭಾಗಶಃ ಸುಟ್ಟು ಹೋಗಿದೆ. ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಸುಮಾರು 1.20 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ದಿಯೂ ನಡೆಯಬೇಕು: ಸುನಿಲ್ ಕುಮಾರ್

ಹೆಬ್ರಿ: ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಸದೃಢವಾಗುತ್ತಿದೆ. ಅರ್ಹರೆಲ್ಲರಿಗೂ ಯೋಜನೆಗಳ ಲಾಭ ತಲುಪಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಬಡವರಿಗೆ ಗ್ಯಾರಂಟಿ ಯೋಜನೆಯು ಶಕ್ತಿ ನೀಡಿದೆ. ಗ್ಯಾರಂಟಿ ಯೋಜನೆಗಳು ಮಾತ್ರ ಸರ್ಕಾರದ ಸಾಧನೆಯಾಗಬಾರದು, ಅಭಿವೃದ್ಧಿ ಕಾರ್ಯಗಳು ಕೂಡ ನಡೆಯಬೇಕು. ಅಭಿವೃದ್ಧಿಗೆ ಅನುದಾನ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಹೇಳಿದರು. ಹೆಬ್ರಿ ತಾಲ್ಲೂಕು ಆಡಳಿತದ ವತಿಯಿಂದ ಸಮಾಜ ಮಂದಿರದಲ್ಲಿ ಗುರುವಾರ ನಡೆದ ಹೆಬ್ರಿ ಹೋಬಳಿ ಮಟ್ಟದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ […]

ಕಾರ್ಕಳ: ಕ್ರಿಯೇಟಿವ್‌ ಪುಸ್ತಕ ಮನೆಯ “ಮೊಬೈಲ್‌ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ

ಕಾರ್ಕಳ: ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶದಿಂದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನವನ್ನು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಯಶಸ್ವಿಗೊಳಿಸಲಾಯಿತು. ಸಾಹಿತ್ಯ ಕ್ಷೇತ್ರ ಓದುಗರ ಬರ ಎದುರಿಸುತ್ತಿದೆ ಎಂಬ ಮಾತಿನ ನಡುವೆಯೂ “ದಿನಕ್ಕೊಂದು ಪುಸ್ತಕ”ವನ್ನು ಶಾಲೆಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ಕಾರ್ಕಳ ತಾಲೂಕಿನ ಸ್ಥಳೀಯ ಶಾಲೆಗಳನ್ನು ಸಂದರ್ಶಿಸಿ ಪುಸ್ತಕವನ್ನು […]