ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅವಶ್ಯ: ಸಂತೋಷ್ ಡಿಸಿಲ್ವಾ

ಕಾರ್ಕಳ: ಶಿಕ್ಷಣ ಎಂದರೇ ಕೇವಲ ಪಾಠ ಪ್ರವಚನ ಮಾತ್ರವಲ್ಲ, ವಿದ್ಯಾರ್ಥಿಯ ದೇಹ ಮನಸ್ಸುಗಳನ್ನು ಒಂದುಗೂಡಿಸುವ ಜ್ಞಾನದ ಜೊತೆಗೆ ಕ್ರೀಡೆಯೂ ಕೂಡಾ ಬಹು ಮುಖ್ಯ. ಆಗ ಮಾತ್ರ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೊಳ್ಳಲು ಸಾಧ್ಯ ಎಂದು ಉದ್ಯಮಿ ಸಂತೋಷ್ ಡಿಸಿಲ್ವಾ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಪರಿಶ್ರಮ ಮತ್ತು ಮುನ್ನುಗ್ಗುವ ಛಲವಿದ್ದಲ್ಲಿ ಕ್ರೀಡೆಯಲ್ಲಿ ಉತ್ತಮ ಭವಿಷ್ಯವಿದೆ. ಜೀವನದಲ್ಲಿ ಒತ್ತಡ ರಹಿತವಾಗಿರಲು ಕ್ರೀಡೆಗಳು […]
ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಗಣಿತನಗರ: ವಿದ್ಯಾರ್ಥಿಗಳಲ್ಲಿರುವ ಒತ್ತಡ, ದುಗುಡ, ದುಮ್ಮಾನ ದೂರ ಮಾಡಿ, ಉತ್ಸಾಹದಿಂದ ಬೆಳೆಯಲು ಸಹಕಾರಿ ಕ್ರೀಡೆಯಾಗಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕವಾಗಿ ಗುರುತಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಸಮಾಜದ ಮುಖ್ಯ ವೇದಿಕೆ ಸಿಗಲು ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ವಿಭಾಗದ ಉಪನಿರ್ದೇಕ ಡಾ. ರೋಷಣ್ ಕುಮಾರ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಪ.ಪೂ. […]
ಉಡುಪಿಗೂ ಕಾಲಿಟ್ಟಿತು ಕೆಂಗಣ್ಣು ರೋಗ: ದ.ಕದಲ್ಲಿ ಸೋಂಕಿತರ ಪ್ರಮಾಣ ಇಳಿಕೆ

ಉಡುಪಿ: ದ.ಕನ್ನಡದಾದ್ಯಂತ ಜನಸಾಮಾನ್ಯರನ್ನು ಕಾಡಿದ ಕೆಂಗಣ್ಣು ರೋಗ ಇದೀಗ ಉಡುಪಿಗೂ ಕಾಲಿಟ್ಟಿದ್ದು, ರೋಗಕ್ಕೆ ತುತ್ತಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಕುಂದಾಪುರ ತಾಲೂಕುಗಳಲ್ಲಿ ಕೆಂಗಣ್ಣು ರೋಗಕ್ಕೆ ಹಲವರು ತುತ್ತಾಗಿದ್ದಾರೆ. ಈ ಮಧ್ಯೆ, ದ.ಕನ್ನಡದಲ್ಲಿ ರೋಗ ಬಾಧೆ ಇಳಿಕೆಯಾಗಿದ್ದು ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಕಡಿಮೆಯಾಗಿದೆ. ಉಡುಪಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಂಗಣ್ಣಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಗಣ್ಣು ರೋಗವು ಒಂದು ವೈರಾಣು ಬಾಧಿತ ರೋಗವಾಗಿದ್ದು, ವಾರದೊಳಗೆ ಗುಣಮುಖವಾಗುತ್ತದೆ. ಕೆಂಗಣ್ಣು ರೋಗದಿಂದ […]
ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

ಕಾರ್ಕಳ: ಭಾನುವಾರ ಸಂಜೆ ವ್ಯಕ್ತಿಯೊಬ್ಬರು ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯನ್ನು ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸಿಗೆ ತೆರಳಲು ಬಸ್ಸು ಹತ್ತುವ ಸಂದರ್ಭ ಆಯತಪ್ಪಿ ಬಿದ್ದು ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, […]
ರನ್ನಿಂಗ್ ರೇಸ್ ನಲ್ಲಿ ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಕಾರ್ತಿಕ್ ವೈ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಜ್ಞಾನಸುಧಾ ಪಿ.ಯು.ಕಾಲೇಜಿನ ಆಶ್ರಯದಲ್ಲಿ ನವೆಂಬರ್ 29 ಹಾಗೂ 29 ರಂದು ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ, ಕಾರ್ಕಳ ಜ್ಞಾನಸುಧಾದ ಕಾರ್ತಿಕ್ ವೈ 1500 ಮೀಟರ್ ರೇಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಜನ ವಿ ಬೆಸ್ಕೂರ್ ಡಿಸ್ಕಸ್ ತ್ರೋ ನಲ್ಲಿ ತೃತೀಯ ಹಾಗೂ 4*100 ಮೀ ರಿಲೇಯಲ್ಲಿ ಸನ್ನಿಧಿ ಶೆಟ್ಟಿ, ಸನ್ನಿಧಿ, ಸನ್ನಿಧಿ ಪೂಜಾರಿ ಹಾಗೂ ಅದಿತಿ ಶೆಟ್ಟಿ ಇವರು ತೃತೀಯ […]