ಕಾರ್ಕಳ ಎಂ. ಪಿ. ಎಂ. ಕಾಲೇಜಿನಲ್ಲಿ ಮಾನವಿಕ ಸಂಘ ಉದ್ಘಾಟನೆ

ಕಾರ್ಕಳ : ಇಲ್ಲಿನ ಎಂ. ಪಿ. ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಡಿ.2 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳೊಂದಿಗೆ ಉದ್ಯೋಗ ಜೀವನವನ್ನು ರೂಪಿಸಲು ಅನೇಕ ಅವಕಾಶಗಳಿವೆ. ಮೂರು ವರ್ಷದ ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ತಯಾರಿ ನಡೆಸಬೇಕು, ಸತತ ಪರಿಶ್ರಮ ಮತ್ತು ಓದಿನ […]
ಸಾಂಸ್ಕೃತಿಕ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಹಾಸನ ಜಿಲ್ಲೆಯ ಹೆಚ್.ಕೆ.ಎಸ್. ಪಿ.ಯು.ಕಾಲೇಜಿನ ಆಶ್ರಯದಲ್ಲಿ ಡಿ. 1 ರಂದು ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆತ್ಮಿಕಾ ಶೆಟ್ಟಿ ಇವರು ಇಂಗ್ಲಿಷ್ ಆಶು ಭಾಷಣ ಸ್ಫರ್ಧೆಯಲ್ಲಿ ಪ್ರಥಮ, ವೈಷ್ಣವಿ ಶೆಟ್ಟಿ ಇವರು ಕನ್ನಡ ಚರ್ಚಾ ಸ್ಫರ್ಧೆಯಲ್ಲಿ ದ್ವಿತೀಯ ಹಾಗೂ ತನ್ವಿ ಶೆಟ್ಟಿ ಇವರು ಇಂಗ್ಲಿಷ್ ಆಶು ಭಾಷಣದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಇವರನ್ನು ಎಪಿಜಿಇಟಿ ಯ […]
ಮಾತೃಭೂಮಿ ಮತ್ತು ಮಾತೃಭಾಷೆಯನ್ನು ಬೆಳೆಸಿ: ಡಾ. ಹಿರೇಮಗಳೂರು ಕಣ್ಣನ್

ಕಾರ್ಕಳ: ಕನ್ನಡ ಭಾಷೆ ನೆಲ ಜಲವನ್ನು ಉತ್ತುಂಗಕ್ಕೇರಿಸಲು ಯುವ ಪೀಳಿಗೆ ಸನ್ನದ್ದವಾಗಿರಬೇಕು. ಕನ್ನಡದ ಕಂಪನ್ನು ವಿಶ್ವದೆಲ್ಲೆಡೆ ಪಸರಿಸಲು ನಾವು ಶ್ರಮಿಸಬೇಕು. ಪೂರ್ವಜರ ಆಸ್ತಿಯಾದ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ದ್ವೇಷ ತ್ಯಜಿಸಿ ಸುಮನಸಿನವರಾಗಿ, ಹೆತ್ತವರನ್ನು ಪ್ರೀತಿಯಿಂದ ಸಲಹಿ, ಮಾತೃಭೂಮಿ ಮತ್ತು ಮಾತೃ ಭಾಷೆಯನ್ನು ಬೆಳೆಸಬೇಕು ಎಂದು ಡಾ. ಹಿರೇಮಗಳೂರು ಕಣ್ಣನ್ ಕರೆ ನೀಡಿದರು. ಅವರು ಮಂಗಳವಾರದಂದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಕ್ರಿಯೇಟಿವ್ ನುಡಿಹಬ್ಬ-2022’ ಅನ್ನು ಉದ್ಘಾಟಿಸಿ ‘ನಿನಾದ’ ತ್ರೈಮಾಸಿಕ ಪತ್ರಿಕೆಯ ಎರಡನೇ ಸಂಚಿಕೆಯನ್ನು […]
ಕಾರ್ಕಳ: ಪರ್ಪಲೆಗಿರಿಯಲ್ಲಿ ದೈವಸ್ಥಾನ ನಿರ್ಮಾಣಕ್ಕಾಗಿ ಭೂ ನಿಧಿ ಸಂಚಯನಕ್ಕೆ ಚಾಲನೆ

ಕಾರ್ಕಳ: ಇಲ್ಲಿನ ಅತ್ತೂರು ಪರ್ಪಲೆಗಿರಿಯಲ್ಲಿ ಶುಕ್ರವಾರದಂದು ಭೂ ನಿಧಿ ಸಂಚಯನದ ಅಂಗವಾಗಿ ಕೇಂಜ ಶ್ರೀಧರ ತಂತ್ರಿಯವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆಯಿತು. ಪರ್ಪಲೆಗಿರಿಯಲ್ಲಿ ದೈವಸ್ಥಾನ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದ್ದು, ದೇವಸ್ಥಾನ ಮತ್ತು ದೈವಸ್ಥಾನ ನಿರ್ಮಾಣ ಹಾಗೂ ಇತರ ಧಾರ್ಮಿಕ ಸಾಮಾಜಿಕ ಕಾರ್ಯಗಳಿಗಾಗಿ ಜಮೀನಿನ ಅವಶ್ಯಕತೆ ಇರುವುದರಿಂದ ಭೂ ನಿಧಿ ಸಂಚಯನ ಯೋಜನೆಯನ್ನು ಹಮ್ಮಿಕೊಂಡಿದ್ದು ( 0.25 ಸೆಂಟ್ಸ್(3,000/-), 0.50 ಸೆಂಟ್ಸ್(6,000/-),1 ಸೆಂಟ್ಸ್(12,000/-) 2 ಸೆಂಟ್ಸ್(24,000/-), 5 ಸೆಂಟ್ಸ್(60,000/-),10 ಸೆಂಟ್ಸ್(1,20,000/-), 25 ಸೆಂಟ್ಸ್ (3 […]
ಕಾರ್ಕಳ: ನವೆಂಬರ್ 26 ರಂದು ಕೋಟಿ ಚೆನ್ನಯ್ಯ ಥೀಂ ಪಾರ್ಕಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ನಡೆಯಲಿರುವ ಮಾಸಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ನವೆಂಬರ್ 26 ರಂದು ಸಂಜೆ 5.30 ಕ್ಕೆ ನಡೆಯಲಿದೆ. ಮೊದಲ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂದು ಸಂಜೆ 6 ರಿಂದ ರಾತ್ರಿ 9 ರವರೆಗೆ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸಲಾಗಿದೆ. ಪ್ರತಿ ತಿಂಗಳು ಥೀಂ ಪಾರ್ಕ್ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು […]