ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ಆಟೋರಿಕ್ಷಾ ಸಂಚಾರದಲ್ಲಿ ಮಾರ್ಪಾಡು

ಉಡುಪಿ: ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು […]

ಮುನಿಯಾಲು ಸಂಜೀವಿನಿ ಫಾರ್ಮ್ಸ್ ಮತ್ತು ಡೈರಿ ಟ್ರಸ್ಟ್: ದೇಸಿ ಗೋವುಗಳ ಹಾಲಿನ ಉತ್ಪನ್ನ ಬಿಡುಗಡೆ

ಕಾರ್ಕಳ: ತಾಲೂಕಿನ ಮುನಿಯಾಲಿನ ಸಂಜೀವಿನಿ ಫಾರ್ಮ್ಸ್ ಮತ್ತು ಡೈರಿ ಟ್ರಸ್ಟ್ ನಲ್ಲಿ ದೇಸಿ ಗೋವುಗಳ ಹಾಲಿನ ಉತ್ಪನ್ನಗಳ ಬಿಡುಗಡೆ ಸಮಾರಂಭ ಭಾನುವಾರ ನಡೆಯಿತು. ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಸಿ.ಇ.ಓ ಎಮ್.ಎಸ್. ಮಹಾಬಲೇಶ್ವರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೇವರು ಗೋವಿನೊಳಗೆ ನೆಲೆಸಿದ್ದಾನೆ, ಹೀಗಾಗಿ ನಾನು ಅವುಗಳ ಮಧ್ಯೆಯೇ ವಾಸಿಸುತ್ತೇನೆ ಎಂದು ಶ್ರೀಕೃಷ್ಣ ಪರಮಾತ್ಮ ಗೀತಾ ಶ್ಲೋಕದ ಮೂಲಕ ತಿಳಿಸಿದ್ದಾನೆ. ಆಧುನಿಕತೆಗೆ ಒಡ್ಡಿಕೊಳ್ಳುತ್ತಿರುವ ಇಂದಿನ ಸಮಾಜದಲ್ಲಿ ರಾಮಕೃಷ್ಣ ಆಚಾರ್ ಮತ್ತು ಸವಿತಾ ಆಚಾರ್ ರವರು ನಡೆಸುತ್ತಿರುವ ಗೋಧಾಮ […]

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಕಾರ್ಯಾಗಾರ

ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಂದು ದಿನದ ಇಂಗ್ಲಿಷ್ ಭಾಷಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಹಾಗೂ ಇಂಗ್ಲಿಷ್ ಭಾಷಾ ಉಪನ್ಯಾಸಕ ಅಬ್ದುಲ್ ಸಮಾದ್ ನೆಕ್ಕಾರೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ನಮ್ಮ ಜೀವನದಲ್ಲಿ ಇಂಗ್ಲಿಷ್ ಭಾಷೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಜೊತೆಗೆ ಹೊಸ ಇಂಗ್ಲಿಷ್ ಪದಗಳನ್ನು ಬಳಸಿ ವಾಕ್ಯ ರಚಿಸುವ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ […]

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕೋಟಿಕಂಠ ಗಾಯನ

ಕಾರ್ಕಳ: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ಹಾಡು ನನ್ನ ನಾಡು ಶೀರ್ಷಿಕೆಯಡಿ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಮಾಹೆಯ ಅಡ್ಮಿನಿಸ್ಟ್ರೇಟಿವ್ ಶ್ರೀನಿಧಿ ಕಾಮತ್, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಉಷಾ ರಾವ್ ಯು, ಉಪ ಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು, […]

ಕಾರ್ಕಳ: ಜ್ಞಾನಸುಧಾ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ

ಗಣಿತನಗರ :ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು, ನಾಯಕತ್ವವನ್ನು ಕಲಿಸುವುದರ ಜೊತೆಗೆ ಸಹನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅನಿಲ್ ಕುಮಾರ್‌ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾ.ಸೇ.ಯೋ. ಘಟಕದಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ -2022ರ ದಿಕ್ಸೂಚಿ ಭಾಷಣವನ್ನುದ್ದೇಶಿಸಿ ಮಾತನಾಡಿ, ಎನ್.ಎಸ್.ಎಸ್ ಜೊತೆಗಿನ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡು, ಎನ್.ಎಸ್.ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿಂದಿನ ಶಕ್ತಿಯಾಗಿ ಪಾತ್ರವಹಿಸುತ್ತದೆ ಎಂದರು. ಶಿಬಿರವನ್ನು […]