ನಿಟ್ಟೆ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಪದ್ಮಾವತಿ ಕೆ ಅವರಿಗೆ ಡಾಕ್ಟರೇಟ್

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಪದ್ಮಾವತಿ ಕೆ ಅವರು ‘ಕಂಪ್ಯೂಟರ್ ಏಯ್ಡೆಡ್ ಡಯಗ್ನೋಸಿಸ್ ಬೇಸ್ಡ್ ಆನ್ ಫ್ಯೂಶನ್ ಆಫ್ ಮಲ್ಟಿಮೋಡಲ್ ಡಾಟಾ’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ. ಇವರು ಬೆಂಗಳೂರಿನ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಮಾಯಾ ವಿ ಕರ್ಕಿ ಅವರ […]

ಸಿಂಗಲ್ ಲೇಔಟ್ ಸಮಸ್ಯೆ: ಕೋರ್ಟ್ ಆದೇಶಕ್ಕನುಗುಣವಾಗಿ ಖಾತಾ ನೀಡುವಂತೆ ಪುರಸಭಾ ಸದಸ್ಯ ಶುಭದಾರಾವ್ ಆಗ್ರಹ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾಧ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಿರಲಿಲ್ಲ. ಆದರೀಗ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ ಭರವಸೆಯನ್ನು ಮೂಡಿಸಿದೆ. ಈ‌ ಆದೇಶವನ್ನೇ ಮಾದರಿಯಾಗಿ ಎಲ್ಲಾ ಅರ್ಜಿದಾರರಿಗೂ ಖಾತಾ ನೀಡುವಂತೆ ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ. ನಗರದಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]

ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾಟ: ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಭುವನೇಂದ್ರ ಪಿಯು ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ. ಬಾಲಕರ ತಂಡದ ನಿಶಾಂತ್‌ ನರಸಿಂಹ ಹೆಗ್ಡೆ ಹಾಗೂ ಬಾಲಕಿಯರ ತಂಡದ ಸಾರ ಕ್ಷೇವಿಯರ್‌ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ […]

ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ಸರಿಪಡಿಸದಿದ್ದಲ್ಲಿ ಸಂಸದರ ಕಚೇರಿಗೆ ಮುತ್ತಿಗೆ: ವಿನಯ್ ಕುಮಾರ್ ಸೊರಕೆ

ಉಡುಪಿ: ಉಡುಪಿಯನ್ನು ಕಾರ್ಕಳಕ್ಕೆ ಸಂಪರ್ಕಿಸುವ ಮುಖ್ಯರಸ್ತೆ ಪರ್ಕಳದಿಂದ ಗುಡ್ಡೆಯಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿಯು ದುರವಸ್ಥೆಯಲ್ಲಿದ್ದು, ದುರಸ್ತಿ ಮಾಡಬೇಕಾದ ಸಂಸದೆ ಶೋಭಾ ಕರಂದ್ಲಾಜೆ ಅಡಗಿ ಕುಳಿತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಗುರುವಾರ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯದ ನೇತೃತ್ವದಲ್ಲಿ ರಾಷ್ಟೀಯ ಹೆದ್ದಾರಿಯನ್ನು ದುರಸ್ತಿಗೊಳಿಸುವಂತೆ ಕೋರಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ಸರ್ಕಾರದ ವಿರುದ್ದ ಧಿಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಹೆದ್ದಾರಿ ತಡೆ ನಡೆಸಿ ಜಿಲ್ಲಾಡಳಿತ ಮತ್ತು […]

ಕಾರ್ಕಳ: 14 ನೇ ಶತಮಾನದ ಕನ್ನಡ ಶಾಸನ ಪತ್ತೆ

ಕಾರ್ಕಳ: ಇಲ್ಲಿನ ಅಜೆಕಾರಿನ ಗಾಣದಬೆಟ್ಟು ಎಂಬಲ್ಲಿ ಸಂಶೋಧಕರ ತಂಡಕ್ಕೆ 14 ನೇ ಶತಮಾನದ ಕನ್ನಡ ಶಾಸನವೊಂದು ದೊರೆತಿದೆ. ಉಡುಪಿಯ ಓರಿಯಂಟಲ್ ಆರ್ಕೈವ್ಸ್ ಸಂಶೋಧನಾ ಕೇಂದ್ರದ ನಿರ್ದೇಶಕ ಎಸ್.ಎ ಕೃಷ್ಣಯ್ಯ, ಯು ಕಮಲಾಬಾಯಿ ಪ್ರೌಢಶಾಲೆಯ ನಿವೃತ್ತ ಉಪಾಧ್ಯಾಯ ಕೆ ಶ್ರೀಧರ್ ಭಟ್ ಮತ್ತು ಹೈದರಾಬಾದಿನ ಪ್ಲೀಚ್ ಇಂಡಿಯಾ ಫೌಂಡೇಶನ್ನಿನ ಶೃತೇಶ್ ಆಚಾರ್ಯ ತಂಡವು ಅಮ್ಮು ಶೆಟ್ಟಿ ಎನ್ನುವವರಿಗೆ ಸಂಬಂಧಪಟ್ಟ ಜಾಗದಲ್ಲಿ ಈ ಶಾಸನವನ್ನು ಪತ್ತೆ ಮಾಡಿದೆ. ಮೂರು ಫೀಟ್ ಉದ್ದ ಎರಡು ಫೀಟ್ ಅಗಲದ ಗ್ರಾನೈಟ್ ಶಿಲೆಯ ಶಾಸನವನ್ನು […]