ಕಾರ್ಕಳ: ರಸ್ತೆ ಅಪಘಾತ ಒರ್ವ ಸಾವು
![](https://udupixpress.com/wp-content/uploads/2019/01/IMG-20190116-WA0059-768x1024.jpg)
ಕಾರ್ಕಳ: ತಾಲೂಕಿನ ಅಯ್ಯಪ್ಪನಗರ ನೆಲ್ಲಿಗುಡ್ಡೆ ಎಂಬಲ್ಲಿ ಬುಧವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ದಿನೇಶ್ ಮೃತಪಟ್ಟವರು. ಹಿಂಬದಿ ಸವರರಾದ ಮುರುಗೇಶ್ ಹಾಗೂ ವೇಲು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಉಡುಪಿಯಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಗೆ ದಿನೇಶ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಕಾರ್ಕಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.