ಮನೆ ಮನೆ ಮಾತಾಗಲಿರುವ ಕಾರ್ಕಳ ಉತ್ಸವ: ಮಾರ್ಚ್ 10 ರಿಂದ 20 ರವರೆಗೆ ಸಂಸ್ಕೃತಿಯ ರಸದೌತಣ

ಕಾರ್ಕಳ: ಮಾರ್ಚ್ 10 ರಿಂದ 20 ರವರೆಗೆ ಕಾರ್ಕಳ ದಲ್ಲಿ ನಡೆಯುವ ಕಾರ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೋಮವಾರದಂದು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದು ಮನೆ ಮನೆ ಮಾತಾಗಲಿದೆ ಎಂದರು. ನ್ಯಾಯವಾದಿ ಎಂ.ಕೆ ವಿಜಯ ಕುಮಾರ್, ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ್ ಪ್ರಭು, ಅನಂತ ಪದ್ಮನಾಭ ದೇವಸ್ಥಾನದ […]

ಕಾರ್ಕಳದ ಅತ್ತೂರು ಬೆಸಿಲಿಕಾ ಚರ್ಚಿನಲ್ಲಿ ಸಂಭ್ರಮದ ವಾರ್ಷಿಕೋತ್ಸವಾಚರಣೆಗಳು ಪ್ರಾರಂಭ

ಕಾರ್ಕಳ: ಫೆ.20, ಭಾನುವಾರದಂದು, ಅತ್ತೂರಿನ ಸಂತ ಲಾರೆನ್ಸ್ ಮೈನರ್ ಬೆಸಿಲಿಕಾದ ವಾರ್ಷಿಕ ಉತ್ಸವದ ಆಚರಣೆಗಳು ಸಂಭ್ರಮದಿಂದ ಆರಂಭವಾಯಿತು. ಜನವರಿ ಕೊನೆಯ ವಾರದಲ್ಲಿ ನಡೆಯಬೇಕಿದ್ದ ವಾರ್ಷಿಕ ಹಬ್ಬವನ್ನು ಕೋವಿಡ್ ಭೀತಿಯಿಂದಾಗಿ ಮುಂದೂಡಲಾಗಿತ್ತು. ಭಾನುವಾರ ಬೆಳಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಬೆಳಗಿನ ಜಾವ ನಡೆದ ಹಬ್ಬದ ಪವಿತ್ರ ಆಚರಣೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೋ ವಹಿಸಿದ್ದರೆ, ಸಂಜೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ವಹಿಸಿದ್ದರು.   […]

ಉಡುಪಿ ಸೀರೆ ಪುನಶ್ಚೇತನಗೈದ ಕದಿಕೆ ಟ್ರಸ್ಟ್ ಗೆ ನಬಾರ್ಡ್ ನಿಂದ ಸಿಕ್ಕಿತು ರಾಷ್ಟ್ರಮಟ್ಟದ ಹೆಗ್ಗಳಿಕೆ

ಕಾರ್ಕಳ: ಕಳೆದ ಮೂರುವರೆ ವರ್ಷಗಳಿಂದ ಅಳಿವಿನಂಚಿನಲ್ಲಿದ್ದ ಉಡುಪಿ ಸೀರೆ ನೇಕಾರಿಕೆ ಪುನಶ್ಚೇತನಕ್ಕೆ ಶ್ರಮಿಸುತ್ತಿರುವ ಕದಿಕೆ ಟ್ರಸ್ಟ್ ಈ ಸಲದ ನಬಾರ್ಡ್ ಮುಂಬೈ ಮುಖ್ಯ ಕಚೇರಿಯಿಂದ ಕೈಮಗ್ಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಂಸ್ಥೆಗಳಲ್ಲಿ ಒಂದು ಎಂಬುದಾಗಿ ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಆಗಿದೆ. ಆಗಸ್ಟ್ 6 ರಂದು ನಡೆದ ಈ ಆನ್ಲೈನ್ ಕಾರ್ಯಕ್ರಮದಲ್ಲಿ ಕೊಡಲಾದ ಈ ಪ್ರಶಸ್ತಿಯನ್ನು ಆ.16 ರಂದು ಕಿನ್ನಿಗೋಳಿಯ ತಾಳಿಪಾಡಿ ನೇಕಾರ ಸಂಘದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ಸಪ್ತಾಹ ಆಚರಣೆಯ ಸಂದರ್ಭದಲ್ಲಿ ದ ಕ ಜಿಲ್ಲಾಧಿಕಾರಿ […]

‘ಸಿಜಿಕೆ-2020 ರ ಪ್ರಶಸ್ತಿಗೆ ಕಲಾವಿದ ಚಂದ್ರನಾಥ ಬಜಗೋಳಿ ಆಯ್ಕೆ

ಕಾರ್ಕಳ: ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ, ಸಂಸ ಥಿಯೇಟರ್, ಅವಿರತ ಪುಸ್ತಕ ಬೆಂಗಳೂರು ಆರ್ಟ್ ಫೌಂಡೇಶನ್ ನೀಡುವ ಸಿಜಿಕೆ 2020ರ ಪ್ರಶಸ್ತಿಗೆ ಕಲಾವಿದ, ರಂಗ ನಿರ್ದೇಶಕ, ಕಾರ್ಕಳದ ಚಂದ್ರನಾಥ ಬಜಗೋಳಿ ಅವರು ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುಕುಮಾರ್ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಂದ್ರನಾಥ ಬಜಗೋಳಿ ಕಳೆದ 24 ವರ್ಷಗಳಿಂದ ಚಿತ್ರಕಲೆ ಮತ್ತು ರಂಗಭೂಮಿಯ ಚಟುವಟಿಕೆಗಳಲ್ಲಿ ನಿರಂತರ ಸೇವೆ ಮಾಡುತ್ತಾ ಬಂದಿದ್ದು, ಐದು ದೊಡ್ಡ ನಾಟಕಗಳು ಹಾಗೂ 17 ಸಣ್ಣ ನಾಟಕಗಳನ್ನು ರಚಿಸಿದ್ದಾರೆ. ಹಿರಿಯ ಸಾಹಿತಿಗಳಾದ […]

ಉಡುಪಿ ಜಿಲ್ಲೆಗೆ ಬಿಗ್ ಶಾಕ್ ! ಕಾರ್ಕಳದ ಪೊಲೀಸರಿಗೆ ಬಂತು ಕೊರೋನಾ,ಇಬ್ಬರಿಗೆ ಕೊರೋನಾ ಸೋಂಕು ದೃಢ:

ಉಡುಪಿ:  ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಿದ್ದ ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಅಜೆಕಾರಿನ ತಲಾ ಓರ್ವ ಪೊಲೀಸರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು  ಈ ಸುದ್ದಿಗೆ ಉಡುಪಿ ಜಿಲ್ಲೆ ತತ್ತರಿಸಿದರೆ. ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಪೊಲೀಸರಿಗೂ ಸೋಂಕು ತಗಲುವ ಮೂಲಕ ಕೊರೋನಾ ತನ್ನ ಕಬಂಧಬಾಹು ಮತ್ತಷ್ಟು ವಿಸ್ತರಿಸಿದೆ. ಎರಡೂ ಕಡೆಯ ಒಟ್ಟು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡುವ  ಸಾಧ್ಯತೆ ಇದ್ದು ಕಾರ್ಕಳ ವ್ಯಾಪ್ತಿಯ ಜನರು ಕಂಗಾಲಾಗಿದ್ದಾರೆ. ಎಎಸ್ ಐಗೂ […]