ಕರ್ನಾಟಕ ಚುನಾವಣೆ: ಬಿಜೆಪಿಗೆ ಪ್ರಧಾನ್-ಅಣ್ಣಾಮಲೈ ಸಾರಥ್ಯ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಶನಿವಾರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿದೆ. ಪಕ್ಷ ಸಂಘಟನೆಯಲ್ಲಿ ಅನುಭವವಿರುವ ಪ್ರಧಾನ್, ಈ ಹಿಂದೆಯೂ ಹಲವು ಚುನಾವಣೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕಕ್ಕೆ ಅಣ್ಣಾಮಲೈ ಹೊಸಬರೇನಲ್ಲ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಸಿಂಘಂ ಎಂದು ಖ್ಯಾತಿವೆತ್ತಿದ್ದ ಅಣ್ಣಾಮಲೈ ಇಲ್ಲಿನವರಿಗೆ ಚಿರಪರಿಚಿತ ಹೆಸರು. ಕರ್ನಾಟಕದಲ್ಲಿ ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ […]

ಸಂಸದರ ನಿಧಿ ಬಳಕೆಯಲ್ಲಿ ಕರ್ನಾಟಕಕ್ಕೆ 16ನೇ ಸ್ಥಾನ

ನವದೆಹಲಿ: ಬಿಜೆಪಿಯ 25 ಸೇರಿದಂತೆ 28 ಸಂಸದರನ್ನು ಹೊಂದಿರುವ ಕರ್ನಾಟಕವು, ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಲೋಕಸಭಾ ಸದಸ್ಯರಿಗೆ ಮೀಸಲಿಟ್ಟ 140 ಕೋಟಿ ರೂ.ಗಳಲ್ಲಿ 20 ಕೋಟಿ (ಶೇ. 14) ಮಾತ್ರ ಬಳಸಿಕೊಂಡಿದೆ. ನಿಧಿ ಬಳಕೆಯಲ್ಲಿ ರಾಜ್ಯ 16ನೇ ಸ್ಥಾನದಲ್ಲಿದೆ. ಕೇಂದ್ರ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಬುಧವಾರ ಕೇಂದ್ರ ಬಜೆಟ್ ಮಂಡನೆಗೆ ಮುನ್ನ 2022-2023ರಲ್ಲಿ ನಿಧಿಯ ಬಳಕೆಯ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕರ್ನಾಟಕದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಇಬ್ಬರೂ ಒಟ್ಟಾಗಿ […]

ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯ ಚುನಾವಣೆಯ ದಿಕ್ಸೂಚಿ: ನಯನಾ ಗಣೇಶ್, ವೀಣಾ ಶೆಟ್ಟಿ

ಉಡುಪಿ: ಗುಜರಾತ್ ಬಿಜೆಪಿ ಜಯಭೇರಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿದ್ದಾರೆ. ಗುಜರಾತ್ ನಲ್ಲಿ 7ನೇ ಬಾರಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ದಾಖಲೆ ನಿರ್ಮಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಯಶಸ್ವಿ ಆಡಳಿತ, ಅಭಿವೃದ್ಧಿ ಪರ ಚಿಂತನೆಗೆ ಮತದಾರರ ಒಲವು ವ್ಯಕ್ತವಾಗಿದೆ. ಗುಜರಾತ್ ರಾಷ್ಟ್ರಕ್ಕೆ ಒಂದು ಮಾದರಿ ರಾಜ್ಯವಾಗಿ ರೂಪುಗೊಂಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವದಿಂದ ಗೆಲುವು ಸಾಧಿಸಿದ್ದು ಈ ಫಲಿತಾಂಶ ಮುಂದಿನ ರಾಜ್ಯ […]

ಆನ್‌ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆನ್‌ಲೈನ್ ಗೇಮಿಂಗ್ ಜನರ, ಅದರಲ್ಲೂ ವಿಶೇಷವಾಗಿ ಯುವಜನರ ಜೀವನವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿ ಹಲವಾರು ರಾಜ್ಯಗಳು ಆನ್‌ಲೈನ್ ಗೇಮಿಂಗ್ ಅನ್ನು ನಿಷೇಧಿಸಲು ಕಾನೂನನ್ನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ. ಗುಜರಾತ್‌ನ ಏಕತಾನಗರದಲ್ಲಿ ನಡೆದ ಎರಡು ದಿನಗಳ ಕಾನೂನು ಸಚಿವರು ಮತ್ತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ಬೇಡಿಕೆಯನ್ನು ಸಲ್ಲಿಸಲಾಗಿದೆ. ಹಲವಾರು ಯುವಕರು ಬೆಟ್ಟಿಂಗ್ ಮತ್ತು ಪಂತದ ಆನ್‌ಲೈನ್ ಗೇಮಿಂಗ್ ನಲ್ಲಿ ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇಂತಹ ವ್ಯಸನಾಧಾರಿತ ಆಟಗಳನ್ನು ನಿಷೇಧಿಸಬೇಕೆಂದು ಕರ್ನಾಟಕ, […]

ಬಿಸಿಸಿಐ ಅಧಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಹೆಸರು ಪ್ರಸ್ತಾಪ: ಸೌರವ್ ಗಂಗೂಲಿ ಐಸಿಸಿಯತ್ತ ಪಯಣ?

ಭಾರತದ ಮಾಜಿ ಆಲ್‌ರೌಂಡರ್ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿರುವ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಅಗ್ರ ಸ್ಪರ್ಧಿಯಾಗಿದ್ದಾರೆ ಎಂದು ವರದಿಯಾಗಿದೆ. 67 ವರ್ಷದ ಮಾಜಿ ಆಲ್‌ರೌಂಡರ್ ಬಿಸಿಸಿಐ ಮುಖ್ಯಸ್ಥರಾಗಲಿದ್ದಾರೆ ಮತ್ತು ಜೈ ಶಾ ಅವರು ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ಅಕ್ಟೋಬರ್ 18 ರಂದು ನಡೆಯಲಿರುವ ಚುನಾವಣೆಗಾಗಿ ಬಿಸಿಸಿಐನ ಕರಡು ಮತದಾರರ ಪಟ್ಟಿಯಲ್ಲಿ ಬಿನ್ನಿ […]