ನೇಕಾರರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನ

ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ನೇಕಾರರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರಾಜ್ಯದಲ್ಲಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮಾ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಹಾಗೂ ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಇತರೆ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಾಂಗ ಮಾಡುತ್ತಿರುವ ನೇಕಾರರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಸೇವಾಸಿಂಧು ತಂತ್ರಾಂಶದ ಮೂಲಕ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ […]

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ […]

ಸ್ಟಾರ್ಟ್ ಅಪ್ ಶ್ರೇಯಾಂಕ: ಗುಜರಾತ್, ಮೇಘಾಲಯ ಮತ್ತು ಕರ್ನಾಟಕ ಅತ್ಯುತ್ತಮ ಪ್ರದರ್ಶಕರು

ನವದೆಹಲಿ: ಉದ್ಯಮ ಮತ್ತು ಆಂತರಿಕ ವ್ಯಾಪಾರದ ಪ್ರಚಾರ ಇಲಾಖೆ (ಡಿಪಿಐಐಟಿ)ಯ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶ್ರೇಯಾಂಕದ ಪ್ರಕಾರ, ಉದಯೋನ್ಮುಖ ಉದ್ಯಮಿಗಳಿಗಾಗಿ(ಸ್ಟಾರ್ಟ್ ಅಪ್) ಆರಂಭಿಕ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಗುಜರಾತ್, ಮೇಘಾಲಯ ಮತ್ತು ಕರ್ನಾಟಕವು ಅತ್ಯುತ್ತಮ ಪ್ರದರ್ಶನ ನೀಡುವ ರಾಜ್ಯಗಳಾಗಿ ಹೊರಹೊಮ್ಮಿವೆ. ಕೇರಳ, ಮಹಾರಾಷ್ಟ್ರ, ಒಡಿಶಾ ಮತ್ತು ತೆಲಂಗಾಣವನ್ನು ಉನ್ನತ ಪ್ರದರ್ಶನಕಾರರು ಎಂದು ವರ್ಗೀಕರಿಸಲಾಗಿದೆ. ರಾಜ್ಯಗಳ ಸ್ಟಾರ್ಟಪ್ ಶ್ರೇಯಾಂಕ 2021 ಅನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸೋಮವಾರ ಬಿಡುಗಡೆ ಮಾಡಿದರು. ಒಟ್ಟು 24 […]

ಕೇರಳಕ್ಕೆ ಮುಂಚಿತವಾಗಿ ಆಗಮಿಸಿದ ಮಾನ್ಸೂನ್: ಜೂನ್ 2 ರೊಳಗೆ ಕರ್ನಾಟಕಕ್ಕೆ ಮುಂಗಾರು ಮಳೆಯ ಸಿಂಚನ

ಬೆಂಗಳೂರು: ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮೂರು ದಿನಗಳ ಮುಂಚಿತವಾಗಿ ಭಾನುವಾರವೆ ಕೇರಳಕ್ಕೆ ಆಗಮಿಸಿದ್ದು, ಜೂನ್ 2 ರ ವೇಳೆಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಇದು ನಾಲ್ಕು ತಿಂಗಳ ಅವಧಿಯ ಸಾಮಾನ್ಯ ಮಳೆಗಾಲದ ಮುನ್ಸೂಚನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ತಮಿಳುನಾಡು, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಭಾರೀ ಮಳೆ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಬೆಳಿಗ್ಗೆ 8.30 ಕ್ಕೆ ದಾಖಲಿಸಿದ ಮಾಹಿತಿಯು ತೋರಿಸಿದೆ. ಕೇರಳದ 14 ಹವಾಮಾನ ಕೇಂದ್ರಗಳಲ್ಲಿ […]

ಪೋಷಕರೆ ಖಾಸಗಿ ಪದವಿಪೂರ್ವ ಕಾಲೇಜುಗಳ ಮಾನ್ಯತೆ ಖಚಿತಪಡಿಕೊಳ್ಳಿ: ಪದವಿ ಪೂರ್ವ ಶಿಕ್ಷಣ ಇಲಾಖೆ

ಉಡುಪಿ: ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ, ಜಿಲ್ಲೆಯಲ್ಲಿರುವ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ, ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಖಚಿತಪಡಿಸಿಕೊಂಡ ನಂತರವೇ ಪದವಿಪೂರ್ವ ತರಗತಿಗಳಿಗೆ ದಾಖಲಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.