ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆನ್ಲೈನ್ ಗೇಮಿಂಗ್ ಜನರ, ಅದರಲ್ಲೂ ವಿಶೇಷವಾಗಿ ಯುವಜನರ ಜೀವನವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿ ಹಲವಾರು ರಾಜ್ಯಗಳು ಆನ್ಲೈನ್ ಗೇಮಿಂಗ್ ಅನ್ನು ನಿಷೇಧಿಸಲು ಕಾನೂನನ್ನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ. ಗುಜರಾತ್ನ ಏಕತಾನಗರದಲ್ಲಿ ನಡೆದ ಎರಡು ದಿನಗಳ ಕಾನೂನು ಸಚಿವರು ಮತ್ತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ಬೇಡಿಕೆಯನ್ನು ಸಲ್ಲಿಸಲಾಗಿದೆ. ಹಲವಾರು ಯುವಕರು ಬೆಟ್ಟಿಂಗ್ ಮತ್ತು ಪಂತದ ಆನ್ಲೈನ್ ಗೇಮಿಂಗ್ ನಲ್ಲಿ ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇಂತಹ ವ್ಯಸನಾಧಾರಿತ ಆಟಗಳನ್ನು ನಿಷೇಧಿಸಬೇಕೆಂದು ಕರ್ನಾಟಕ, […]
ಬಿಸಿಸಿಐ ಅಧಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಹೆಸರು ಪ್ರಸ್ತಾಪ: ಸೌರವ್ ಗಂಗೂಲಿ ಐಸಿಸಿಯತ್ತ ಪಯಣ?

ಭಾರತದ ಮಾಜಿ ಆಲ್ರೌಂಡರ್ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿರುವ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಅಗ್ರ ಸ್ಪರ್ಧಿಯಾಗಿದ್ದಾರೆ ಎಂದು ವರದಿಯಾಗಿದೆ. 67 ವರ್ಷದ ಮಾಜಿ ಆಲ್ರೌಂಡರ್ ಬಿಸಿಸಿಐ ಮುಖ್ಯಸ್ಥರಾಗಲಿದ್ದಾರೆ ಮತ್ತು ಜೈ ಶಾ ಅವರು ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ಅಕ್ಟೋಬರ್ 18 ರಂದು ನಡೆಯಲಿರುವ ಚುನಾವಣೆಗಾಗಿ ಬಿಸಿಸಿಐನ ಕರಡು ಮತದಾರರ ಪಟ್ಟಿಯಲ್ಲಿ ಬಿನ್ನಿ […]
ನೇಕಾರರ ಮಕ್ಕಳ ಉನ್ನತ ಶಿಕ್ಷಣಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ವಿದ್ಯಾರ್ಥಿವೇತನ

ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ನೇಕಾರರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರಾಜ್ಯದಲ್ಲಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮಾ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಹಾಗೂ ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಇತರೆ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಾಂಗ ಮಾಡುತ್ತಿರುವ ನೇಕಾರರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಸೇವಾಸಿಂಧು ತಂತ್ರಾಂಶದ ಮೂಲಕ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರಗಳಿಗೆ […]
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ […]
ಸ್ಟಾರ್ಟ್ ಅಪ್ ಶ್ರೇಯಾಂಕ: ಗುಜರಾತ್, ಮೇಘಾಲಯ ಮತ್ತು ಕರ್ನಾಟಕ ಅತ್ಯುತ್ತಮ ಪ್ರದರ್ಶಕರು

ನವದೆಹಲಿ: ಉದ್ಯಮ ಮತ್ತು ಆಂತರಿಕ ವ್ಯಾಪಾರದ ಪ್ರಚಾರ ಇಲಾಖೆ (ಡಿಪಿಐಐಟಿ)ಯ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶ್ರೇಯಾಂಕದ ಪ್ರಕಾರ, ಉದಯೋನ್ಮುಖ ಉದ್ಯಮಿಗಳಿಗಾಗಿ(ಸ್ಟಾರ್ಟ್ ಅಪ್) ಆರಂಭಿಕ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಗುಜರಾತ್, ಮೇಘಾಲಯ ಮತ್ತು ಕರ್ನಾಟಕವು ಅತ್ಯುತ್ತಮ ಪ್ರದರ್ಶನ ನೀಡುವ ರಾಜ್ಯಗಳಾಗಿ ಹೊರಹೊಮ್ಮಿವೆ. ಕೇರಳ, ಮಹಾರಾಷ್ಟ್ರ, ಒಡಿಶಾ ಮತ್ತು ತೆಲಂಗಾಣವನ್ನು ಉನ್ನತ ಪ್ರದರ್ಶನಕಾರರು ಎಂದು ವರ್ಗೀಕರಿಸಲಾಗಿದೆ. ರಾಜ್ಯಗಳ ಸ್ಟಾರ್ಟಪ್ ಶ್ರೇಯಾಂಕ 2021 ಅನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸೋಮವಾರ ಬಿಡುಗಡೆ ಮಾಡಿದರು. ಒಟ್ಟು 24 […]