ಕಟೀಲು ಬ್ರಹ್ಮಕಲಶೋತ್ಸವ: ವಿಶೇಷ ವೇಷ ಧರಿಸಿ ಸಂಗ್ರಹಿಸಿದ ಹಣ ಕ್ಯಾನ್ಸರ್ ಪೀಡಿತ ಮಗುವಿನ ಹೆತ್ತವರಿಗೆ ಹಸ್ತಾಂತರ

ಮಂಗಳೂರು: ಬ್ಲಡ್ ಕ್ಯಾನ್ಸರ್ ಪೀಡಿತ ಪುಟ್ಟ ಕಂದಮ್ಮನ ಚಿಕಿತ್ಸೆಗಾಗಿ ಶ್ರೀ ಕಟೀಲು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಯುವಕರ ತಂಡವೊಂದು ವಿಶೇಷ ವೇಷ ಧರಿಸಿ 3,00,136 ರೂ. ಹಣ ಸಂಗ್ರಹಿಸಿ ಮಗುವಿನ ಪೋಷಕರಿಗೆ ನೀಡಿದ್ದಾರೆ. ನಿಹಾರಿಕ ಎಂಬ 5 ವರ್ಷದ ಪುಟ್ಟ ಮಗು ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಚಿಕಿತ್ಸೆಗೆ 10 ಲಕ್ಷ ರೂ.‌ ಆಗತ್ಯವಿದೆ. ನಿಹಾರಿಕಾಳ ತಂದೆ ತಾಯಿ ಬಡ ಕುಟುಂಬದವರಾಗಿದ್ದು, ಚಿಕಿತ್ಸೆ ಬೇಕಾದ ಹಣ ಸಂಗ್ರಹಿಸುವುದು ಕಷ್ಟವಾಗಿತ್ತು. ಹೀಗಾಗಿ […]