ಕಟೀಲು ದುರ್ಗಾಪರಮೇಶ್ವರಿ ದೇವಿಗೆ ಸಂಭ್ರಮದ ಬ್ರಹ್ಮಕಲಶೋತ್ಸವ

ಮಂಗಳೂರು: ದುಷ್ಟ ಅರುಣಾಸುರ ದಾಷ್ಟ್ಯತನ ಹೆಚ್ಚಾದಾಗ ಶ್ರೀ ದೇವಿ ದುಂಬಿಯಾಗಿ ಅರುಣಾಸುರನನ್ನು ವಧಿಸಿ ಶ್ರೀ ದೇವಿ ದುರ್ಗಾಪರಮೇಶ್ವರಿಯಾಗಿ ಕಟೀಲು ಕ್ಷೇತ್ರದಲ್ಲಿ ಉದ್ಭವ ಮೂರ್ತಿಯಾಗಿ ನೆಲೆ ನಿಲ್ಲುತ್ತಾಳೆ. ಇಂತಹ ಪುಣ್ಯಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ೧೨ ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ಮನದ ಇಷ್ಟಾರ್ಥ ನೆರವೇರಿಸುವ ಭ್ರಮರಾಂಭಿಕೆ ಬ್ರಹ್ಮಕಲಶೋತ್ಸವ ಅಂಗವಾಗಿ ಜನವರಿ 22ರಿಂದ ಕಟೀಲು ಕ್ಷೇತ್ರದಲ್ಲಿ ವಿಶೇಷ ಪೂಜೆಗಳು ನಡೆದಿದ್ದು, ಇಂದು ಬೆಳಗ್ಗೆ 5 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಆರಂಭಗೊಂಡು, 9.37ಕ್ಕೆ ಮೀನ ಲಗ್ನದಲ್ಲಿ […]

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಳೆ ಬ್ರಹ್ಮಕಲಶಾಭಿಷೇಕ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಳೆ ಬೆಳಿಗ್ಗೆ 6.30 ಕ್ಕೆ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕದ ಆರಂಭವಾಗಲಿದೆ. 9.37ರ ಕುಂಭಲಗ್ನದಲ್ಲಿ ಪ್ರಧಾನಕಲಶಾಭಿಷೇಕ‌ ನಡೆಯಲಿದೆ. ಅಲ್ಲಿ ತನಕ ದೇವಳದ ಶೇಕಡಾ 90 ಧಾರ್ಮಿಕ ವಿಧಿವಿಧಾನ ಹಾಗೂ ಕಲಶಗಳಿಗಾಗಿ ಮುಚ್ಚಲ್ಪಟ್ಟಿರುತ್ತದೆ. ದೇವರಿಗೆ ಬ್ರಹ್ಮಕಲಶಾಭಿಷೇಕದ ನಡೆಯುವ ಸಂದರ್ಭದಲ್ಲಿ ದೇವಾಲಯದ ಒಳಗೆ ನೂರರಷ್ಟು ಮಂದಿ ಮಾತ್ರ ನಿಲ್ಲುವುದಕ್ಕೆ ಸಾಧ್ಯವಾಗುತ್ತದೆ. ಅಲ್ಲದೇ ಸರದಿ ಸಾಲಿನಲ್ಲಿ ಬಂದರೂ ದರ್ಶನ ಕಷ್ಟ. ಹಾಗಾಗಿ ಕಲಶಾಭಿಷೇಕ ಪುಣ್ಯ ಕಾರ್ಯಗಳನ್ನು ಎಲ್ಲರೂ ನೋಡುದಕ್ಕಾಗಿ ದೂರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ […]