ಎಕರೆಗೆ 100 ರೂನಂತೆ 14 ಎಕರೆ ಭೂಮಿ ಚರ್ಚಿಗೆ ಹಸ್ತಾಂತರ: ಕೇರಳ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೊಚ್ಚಿ: ವಯನಾಡು ಜಿಲ್ಲೆಯ ಮನಂತವಾಡಿ ತಾಲೂಕಿನ ಕಲ್ಲೋಡಿಯ ಸೇಂಟ್ ಜಾರ್ಜ್ ಫೊರೇನ್ ಚರ್ಚ್‌ಗೆ ಅಂದಾಜು 5.5358 ಹೆಕ್ಟೇರ್ (ಸುಮಾರು 14 ಎಕರೆ) ಭೂಮಿಯನ್ನು ಎಕರೆಗೆ 100 ರೂನಂತೆ ಮಂಜೂರು ಮಾಡಿದ ರಾಜ್ಯ ಸರ್ಕಾರದ ವಿವಾದಾತ್ಮಕ ಕ್ರಮವನ್ನು ಕೇರಳ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. 2015 ರಲ್ಲಿ ಆಗಿನ ಯುಡಿಎಫ್ ಸರ್ಕಾರವು ತೆಗೆದುಕೊಂಡ ಈ ನಿರ್ಧಾರವು ಆಕ್ರೋಶವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಕೃಷಿ ಮತ್ತು ವಸತಿ ಭೂಮಿಗಾಗಿ ಕಾಯುತ್ತಿರುವ ಹಲವಾರು ಬುಡಕಟ್ಟು ಸಮುದಾಯಗಳ ತುರ್ತು ಅಗತ್ಯಗಳ ಸಂದರ್ಭದಲ್ಲಿ ಸರ್ಕಾರದ ಈ ನಡೆ […]

ಕೇರಳ ಬಿಜೆಪಿ ಒಬಿಸಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ: ಪಿಎಫ್‌ಐ ನಂಟಿದ್ದ15 ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೇರಳ ಹೈಕೋರ್ಟ್

ತಿರುವನಂತಪುರ: ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದ್ದ 15 ಆರೋಪಿಗಳಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಶಿಕ್ಷೆಯನ್ನು ಪ್ರಕಟಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ಕೋರಿತ್ತು. ಅಪರಾಧಿಗಳು “ತರಬೇತಿ […]

ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ನಕಾರ

ತಿರುವನಂತಪುರಂ: ಶುಕ್ರವಾರ ಮಧ್ಯಂತರ ಆದೇಶ ನೀಡಿದ ಕೇರಳ ಹೈಕೋರ್ಟ್, ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ನೀಡಿದ ‘ಎ’ ಪ್ರಮಾಣೀಕರಣವನ್ನು ಕಾನೂನುಬಾಹಿರ ಎಂದು ಘೋಷಿಸಲು ನಿರಾಕರಿಸಿದೆ. ನಾಗರೇಶ್ ಮತ್ತು ಸೋಫಿ ಥಾಮಸ್ ಅವರಿದ್ದ ವಿಭಾಗೀಯ ಪೀಠವು ವಿವಿಧ ಸಂಘಟನೆಗಳ ಪ್ರತಿಭಟನೆಯ ನಡುವೆ ಶುಕ್ರವಾರ ಕೇರಳದಲ್ಲಿ ಬಿಡುಗಡೆಯಾದ ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. […]

ಕಾಂತಾರ ವರಾಹರೂಪಂ ಹಾಡಿಗೆ ಕಂಟಕ: ಕೃತಿಚೌರ್ಯದ ಆಧಾರದ ಮೇಲೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ವಿಶ್ವದಾದ್ಯಂತ ಸಂಚಲನ ಮೂಡಿಸಿದ ಕಾಂತಾರ ಚಿತ್ರಕ್ಕೆ ಕಂಟಕವೊಂದು ಎದುರಾಗಿದೆ. ಬೆಳಗ್ಗಿನ ಸುಪ್ರಭಾತದಂತೆ ಕಾಂತಾರ ಚಿತ್ರದ ಪಂಜುರ್ಲಿ ದೈವದ ‘ವರಾಹ ರೂಪಂ’ ಹಾಡು ಮನಸೂರೆಗೊಳಿಸುವಂತಿದ್ದು, ನಿತ್ಯವೂ ಎಲ್ಲರ ಮನೆಯಲ್ಲೂ ಕೇಳಿಸುತ್ತಿದೆ. ಇದೀಗ ಚಿತ್ರತಂಡವು ಈ ಹಾಡನ್ನು ಬಳಸದಂತೆ ಕೇರಳದ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಕೇರಳ ಮೂಲದ ರಾಕ್ ಮ್ಯೂಸಿಕ್ ಬ್ಯಾಂಡ್ ‘ತೈಕ್ಕುಡಮ್ ಬ್ರಿಡ್ಜ್’ ಸಲ್ಲಿಸಿದ ಮೊಕದ್ದಮೆಯಲ್ಲಿ ಕೋಝಿಕ್ಕೋಡ್‌ನ ಪ್ರಧಾನ ಜಿಲ್ಲಾ ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿದೆ. ವರಾಹ ರೂಪಂ ಅನ್ನು ತೈಕ್ಕುಡಮ್ ಬ್ರಿಡ್ಜ್ ಬ್ಯಾಂಡ್ ನ […]

ಕೇರಳ ಹೈಕೋರ್ಟ್ ನಿಂದ ಪಿಎಫ್‌ಐ ಗೆ ತಪರಾಕಿ: ಬಂದ್ ವೇಳೆಯ ಹಾನಿಗಾಗಿ 5.20 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶ

ಕೊಚ್ಚಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರ ಬಂಧನವನ್ನು ವಿರೋಧಿಸಿ ಸೆಪ್ಟೆಂಬರ್ 23 ರಂದು ಕರೆ ನೀಡಿದ್ದ ಬಂದ್ ವೇಳೆ ಉಂಟಾದ ಹಾನಿಗೆ ಪರಿಹಾರವಾಗಿ 5.20 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ಕೇರಳ ಹೈಕೋರ್ಟ್ ಗುರುವಾರ ಆದೇಶಿಸಿದೆ. ಈ ಮೊತ್ತವನ್ನು 2 ವಾರಗಳಲ್ಲಿ ಠೇವಣಿ ಮಾಡುವಂತೆ ಕೋರ್ಟ್ ತಾಕೀತು ಮಾಡಿದೆ. ವಿಭಾಗೀಯ ಪೀಠ ನ್ಯಾಯಮೂರ್ತಿಗಳಾದ ಎ.ಕೆ. ಜಯಶಂಕರ ನಂಬಿಯಾರ್ ಮತ್ತು ಸಿ.ಪಿ.ಮೊಹಮ್ಮದ್ ನಿಯಾಸ್ ಅವರು ಪಿಎಫ್‌ಐ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಂಡಿದ್ದಾರೆ ಮತ್ತು ಪರಿಹಾರವಿಲ್ಲದೆ ಜಾಮೀನು […]