ಕೇರಳ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಶರೋನ್ ರಾಜ್ ಹತ್ಯೆ ಪ್ರಕರಣ-ಪ್ರೇಯಸಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಿರುವನಂತಪುರಂ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶರೋನ್ ರಾಜ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ವಿಷ ಹಾಕಿ ಪ್ರಿಯಕರನನ್ನು ಕೊಲೆ ಮಾಡಿದ್ದ ಗ್ರೀಷ್ಮಾಗೆ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ 2022ರಲ್ಲಿ ವಿಷ ಪ್ರಾಶನದಿಂದ ಹತ್ಯೆಯಾಗಿದ್ದ. ಆಸ್ಪತ್ರೆಯಲ್ಲಿ ಸಾಯುವ ಮುನ್ನ ತನ್ನ ಸಂಬಂಧಿಕರಲ್ಲಿ ತನ್ನ ಪ್ರೇಯಸಿ ಗ್ರೀಷ್ಮಾ ವಿಷ ಹಾಕಿದ್ದಾಗಿ ಹೇಳಿದ್ದ. ಪೊಲೀಸ್ ವಿಚಾರಣೆ ವೇಳೆ ಗ್ರೀಷ್ಮಾ ಶರೋನ್ ರಾಜ್‌ಗೆ ವಿಷ ಹಾಕಿದ್ದಾಗಿ ಒಪ್ಪಿಕೊಂಡಿದ್ದಳು. ಕಳೆದ ಶುಕ್ರವಾರ (ಜ.17) […]