ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ ಎಂದು ಮಂಗಳವಾರ ಅವರ ಕುಟುಂಬ ಮತ್ತು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಘೋಷಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಘೋಷಿಸಿತು. ಕೇರಳದ ಮಾಜಿ ಮುಖ್ಯಮಂತ್ರಿ ನಿಧನದ ಸುದ್ದಿಯನ್ನು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. ಕೆಲ ದಿನಗಳಿಂದ […]

ಕೇರಳದಲ್ಲಿ ತನ್ನ ವಿಸ್ತರಣೆಯನ್ನು ಸ್ಥಗಿತಗೊಳಿಸಿದ ಕರ್ನಾಟಕದ ನಂದಿನಿ; ಮಿಲ್ಮಾ ಹಾಲಿನ ಉತ್ಪನ್ನಗಳೇ ಸಾಕೆಂದ ನೆರೆರಾಜ್ಯ

ಬೆಂಗಳೂರು: ಇತ್ತೀಚೆಗೆ ಕೇರಳದಲ್ಲಿ ತನ್ನ ಕೆಲವು ಔಟ್‌ಲೆಟ್‌ಗಳನ್ನು ತೆರೆದಿರುವ ಕರ್ನಾಟಕದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ, ರಾಜ್ಯದಲ್ಲಿ ತನ್ನ ವಿಸ್ತರಣೆ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಸಹಕಾರಿಗಳ ಸಚಿವೆ ಜೆ ಚಿಂಚುರಾಣಿ, ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಸಿಇಒ ಅವರಿಂದ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೆಎಂಎಫ್ ನಿರ್ಧಾರವನ್ನು ಸ್ವಾಗತಿಸಿದ ಚಿಂಚುರಾಣಿ, ಕಾಂಗ್ರೆಸ್ ಗೆಲುವಿನ ನಂತರ ಕರ್ನಾಟಕದಲ್ಲಿ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಈ ಬದಲಾವಣೆಯಾಗಿದೆ ಎಂದು ಹೇಳಿರುವುದಾಗಿ ಹಿಂದುಸ್ಥಾನ್ ಟೈಮ್ಸ್ ವರದಿ […]

ಕೇಂದ್ರ ವನ ಧನ್ ಯೋಜನೆಯ ಉಪಕ್ರಮದಡಿ ಮಾರುಕಟ್ಟೆಗೆ ಬರಲಿದೆ ಮಾಲವೇದನ್ ಬುಡಕಟ್ಟು ಜನಾಂಗ ತಯಾರಿಸುವ ಜೇನು ನೆಲ್ಲಿಕಾಯಿ

ತಿರುವನಂತಪುರ: ಸ್ಥಳೀಯ ಸಮುದಾಯವನ್ನು ಅದರಲ್ಲೂ ವಿಶೇಷವಾಗಿ ಬುಡಕಟ್ಟು ಜನರನ್ನು ಒಳಗೊಳ್ಳುವ ದೃಷ್ಟಿಯಿಂದ, ಕೇಂದ್ರ ಸರ್ಕಾರವು ವನ್ ಧನ್ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಬುಡಕಟ್ಟು ಜನಾಂಗದವರು ಉದ್ಯಮಿಗಳಾಗುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸರ್ಕಾರವು ಸಹಾಯ ಮಾಡುತ್ತಿದೆ. ಈ ಯೋಜನೆಯ ಅಂತರ್ಗತ ಇದೀಗ ಕೇರಳದ ರನ್ನಿ ಪ್ರದೇಶದ ಮಾಲವೇದನ್ ಬುಡಕಟ್ಟು ಜನಾಂಗದವರು ತಯಾರಿಸಿದ ಜನಪ್ರಿಯ ಜೇನು ನೆಲ್ಲಿಕಾಯಿ ಕೇರಳ ರಾಜ್ಯದಾದ್ಯಂತ ಲಭ್ಯವಿರಲಿದೆ. ಚಿತ್ತಾರದ ಓಲಿಕಲ್ಲು ಕುಗ್ರಾಮದಲ್ಲಿ ವಾಸವಾಗಿರುವ ಈ ಬುಡಕಟ್ಟು ಜನಾಂಗದವರು ಹಲವು ವರ್ಷಗಳಿಂದ ತಯಾರಿಸುವ ಈ […]

ಮಲ್ಲಪುರಂನಲ್ಲಿ ಬೋಟ್ ದುರಂತ: ಮಕ್ಕಳು ಸೇರಿದಂತೆ 22 ಜನ ಜಲಸಮಾಧಿ

ತಿರುವನಂತಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್‌ಬೋಟ್ ನೀರಿನಲ್ಲಿ ಮುಳುಗಿದ್ದು ಕನಿಷ್ಠ 22 ಜನರು ಸಾವನ್ನಪ್ಪಿದ್ದು ಇದರಲ್ಲಿ ಹೆಚ್ಚಿನವರು ಮಕ್ಕಳು ಎಂದು ವರದಿಯಾಗಿದೆ. ಜಿಲ್ಲಾಡಳಿತದ ವರದಿಗಳ ಪ್ರಕಾರ, ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. ಸಚಿವ ವಿ ಅಬ್ದುರಹಿಮಾನ್ ಪ್ರಕಾರ, 7 ಜನರ ಸ್ಥಿತಿ ಗಂಭೀರವಾಗಿದೆ. ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. Kerala: Rescue operation underway […]

ಕಾಸರಗೋಡು-ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ವೇಳಾಪಟ್ಟಿ ಮತ್ತು ಟಿಕೆಟ್ ದರಗಳು ಇಂತಿವೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಏಪ್ರಿಲ್ 25 ರಂದು ಉದ್ಘಾಟಿಸಲಿದ್ದಾರೆ. ತಿರುವನಂತಪುರಂ ಮತ್ತು ಕಾಸರಗೋಡು ಮಧ್ಯೆ ಕೇರಳದ 11 ಜಿಲ್ಲೆಗಳ ನಡುವೆ ಸಂಚರಿಸಲಿದೆ. ಇದು ದೇಶದ 16ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಾಗಿದೆ. ಕಾಸರಗೋಡು – ತಿರುವನಂತಪುರಂ ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಕಾರ್ಯನಿರ್ವಹಿಸಲಿದ್ದು, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಯಾಗಲಿದೆ. ವಂದೇ […]