ಮಲ್ಲಪುರಂನಲ್ಲಿ ಬೋಟ್ ದುರಂತ: ಮಕ್ಕಳು ಸೇರಿದಂತೆ 22 ಜನ ಜಲಸಮಾಧಿ

ತಿರುವನಂತಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ನೀರಿನಲ್ಲಿ ಮುಳುಗಿದ್ದು ಕನಿಷ್ಠ 22 ಜನರು ಸಾವನ್ನಪ್ಪಿದ್ದು ಇದರಲ್ಲಿ ಹೆಚ್ಚಿನವರು ಮಕ್ಕಳು ಎಂದು ವರದಿಯಾಗಿದೆ. ಜಿಲ್ಲಾಡಳಿತದ ವರದಿಗಳ ಪ್ರಕಾರ, ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. ಸಚಿವ ವಿ ಅಬ್ದುರಹಿಮಾನ್ ಪ್ರಕಾರ, 7 ಜನರ ಸ್ಥಿತಿ ಗಂಭೀರವಾಗಿದೆ. ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. Kerala: Rescue operation underway […]
ಕಾಸರಗೋಡು-ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ವೇಳಾಪಟ್ಟಿ ಮತ್ತು ಟಿಕೆಟ್ ದರಗಳು ಇಂತಿವೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಏಪ್ರಿಲ್ 25 ರಂದು ಉದ್ಘಾಟಿಸಲಿದ್ದಾರೆ. ತಿರುವನಂತಪುರಂ ಮತ್ತು ಕಾಸರಗೋಡು ಮಧ್ಯೆ ಕೇರಳದ 11 ಜಿಲ್ಲೆಗಳ ನಡುವೆ ಸಂಚರಿಸಲಿದೆ. ಇದು ದೇಶದ 16ನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಾಗಿದೆ. ಕಾಸರಗೋಡು – ತಿರುವನಂತಪುರಂ ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಕಾರ್ಯನಿರ್ವಹಿಸಲಿದ್ದು, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಯಾಗಲಿದೆ. ವಂದೇ […]
ಕೊಚ್ಚಿ: ದೇಶದ ಪ್ರಪ್ರಥಮ ವಾಟರ್ ಮೆಟ್ರೋಗೆ ಚಾಲನೆ: ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಲಿನ ಹತ್ತು ಸಣ್ಣ ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ. ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ರೈಲು, ರಸ್ತೆ ಮತ್ತು ನೀರನ್ನು ಸಂಪರ್ಕಿಸುವ ಇಂಟಿಗ್ರೇಟೆಡ್ ಮೆಟ್ರೋ ವ್ಯವಸ್ಥೆಯು ರಾಜ್ಯದ ಅಭಿವೃದ್ದಿಗೆ ವೇಗ ನೀಡಲಿದೆ. ರಸ್ತೆ ಸಾರಿಗೆ ವ್ಯವಸ್ಥೆಯ ಮೇಲಿನ ಒತ್ತಡಗಳನ್ನು ಕಡಿಮೆಗೊಳಿಸಲು ಜಲ […]
ಕೋಝಿಕ್ಕೋಡ್ ರೈಲಿನಲ್ಲಿ ಬೆಂಕಿ ಪ್ರಕರಣ: ಶಂಕಿತ ಆರೋಪಿಯ ಬಂಧನ

ಕೋಝಿಕ್ಕೋಡ್ : ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕಿತ ಶಾರುಖ್ ಸೈಫಿ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಸಹಯೋಗದಿಂದ ಕೇರಳ ಪೊಲೀಸರ ವಿಶೇಷ ತಂಡ ಮಹಾರಾಷ್ಟ್ರ ತಲುಪಿ ಮಂಗಳವಾರ ರಾತ್ರಿ ರತ್ನಗಿರಿಯಿಂದ ಬಂಧಿಸಿದೆ. ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿಗೂ ಸುಟ್ಟ ಗಾಯಗಳಾಗಿದ್ದು, ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಮಧ್ಯೆ ಕೇರಳದ ಎಟಿಎಸ್ […]
ರೈಲಿನಲ್ಲಿ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಪರಿಚಿತ ವ್ಯಕ್ತಿ: 3 ಸಾವು, ಹಲವರಿಗೆ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ 9.50 ರ ಸುಮಾರಿಗೆ ಕೋಝಿಕ್ಕೋಡ್ ರೈಲು ನಿಲ್ದಾಣದಿಂದ (ಉತ್ತರ ಕೇರಳ) ರೈಲು ಹೊರಟ ನಂತರ ಅಲಪುಝಾ-ಕಣ್ಣೂರು ಎಕ್ಸ್ಪ್ರೆಸ್ನ ಡಿ-1 ಕೋಚ್ನೊಳಗೆ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದದ ನಂತರ ಘಟನೆ ಸಂಭವಿಸಿದೆ. ಅಪರಿಚಿತ ವ್ಯಕ್ತಿಯೊಬ್ಬ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಎಳತ್ತೂರು ಮತ್ತು ಕೊಯಿಲಾಂಡಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲು […]