ದೇವಸ್ಥಾನಕ್ಕೂ ಬಂತು ರೋಬೋಟ್ ತಂತ್ರಜ್ಞಾನ: ಕೇರಳದ ದೇವಸ್ಥಾನಕ್ಕೆ ಪೇಟಾ ಸಂಸ್ಥೆಯಿಂದ ಯಾಂತ್ರಿಕ ಆನೆ ಕೊಡುಗೆ

ತ್ರಿಶೂರು: ಇದೇ ಮೊದಲ ಬಾರಿಗೆ, ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜದಪ್ಪಿಲ್ಲಿ ಶ್ರೀ ಕೃಷ್ಣ ದೇವಾಲಯದಲ್ಲಿ ಧಾರ್ಮಿಕ ಆಚರಣೆಗಳನ್ನು ನಿರ್ವಹಿಸಲು ಜೀವ ಇರುವಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಬಳಸಲಾಗಿದ್ದು, ಇದನ್ನು ನಟಿ ಪಾರ್ವತಿ ತಿರುವೋತ್ತು ಅವರ ಬೆಂಬಲದೊಂದಿಗೆ ಪೇಟಾ ಇಂಡಿಯಾ ಸಂಸ್ಥೆಯು ದೇವಸ್ಥಾನಕ್ಕೆ ಉಡುಗೊರೆಯಾಗಿ ನೀಡಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ. ಇರಿಂಜದಪಿಲ್ಲಿ ರಾಮನ್ ಎಂಬ ಹೆಸರಿನ ಯಾಂತ್ರಿಕ ಆನೆಯು ಹತ್ತೂವರೆ ಅಡಿ ಎತ್ತರ ಮತ್ತು 800 ಕೆಜಿ ತೂಕವಿದೆ. ಸುಮಾರು 4 ಜನರನ್ನು ಸಾಗಿಸುವ ಸಾಮರ್ಥ್ಯ […]

ಕಾರಿನಲ್ಲಿ ಆಕಸ್ಮಿಕ ಬೆಂಕಿ: ಗರ್ಭಿಣಿ ಮಹಿಳೆ ಮತ್ತು ಪತಿ ಸಜೀವ ದಹನ

ಕುಟ್ಟಿಯತ್ತೂರು: ಕೇರಳದ ಕುಟ್ಟಿಯತ್ತೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗುರುವಾರ ಸಂಭವಿಸಿದ ಭೀಕರ ದುರ್ಘಟನೆಯೊಂದರಲ್ಲಿ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನರಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಷಾ (26) ಎಂದು ಗುರುತಿಸಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳು ಇನ್ನಿತರರೊಂದಿಗೆ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ […]

ರಾಜ್ಯದ ಪ್ರಥಮ ತೇಲುವ ಸೇತುವೆ ಶೀಘ್ರದಲ್ಲೇ ಪುನರಾರಂಭ: ತಜ್ಞರ ವರದಿ ಬಳಿಕ ಸಾರ್ವಜನಿಕರಿಗೆ ಮುಕ್ತ

ಮಲ್ಪೆ: ಈ ಹಿಂದೆ ಮಲ್ಪೆ ಬೀಚ್‌ನಲ್ಲಿ ಹೊಸ ತೇಲುವ ಸೇತುವೆಯನ್ನು ಸ್ಥಾಪಿಸಲಾಗಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಸೇತುವೆಯನ್ನು ಕಳಚಿಡಲಾಗಿತ್ತು. ಇದೀಗ ತೇಲುವ ಸೇತುವೆಯನ್ನು ಮತ್ತೆ ಸ್ಥಾಪಿಸಿ ಶೀಘ್ರದಲ್ಲೇ ಸಾರ್ವಜನಿಕರಿಗೆ ಮುಕ್ತಮಾಡಲಾಗುವುದು ಎಂದು ವರದಿಯಾಗಿದೆ. ಸೌಲಭ್ಯವು ವೀಕ್ಷಣೆಯಲ್ಲಿದ್ದು, ತಜ್ಞರ ತಂಡವು ತೇಲುವ ಸೇತುವೆಯ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರೀಕ್ಷಿಸಿ ದೃಢಪಡಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಮಲ್ಪೆ ಬೀಚ್‌ನ ಗುತ್ತಿಗೆದಾರ ಸುದೇಶ್ ಶೆಟ್ಟಿ ಮಾತನಾಡಿ, ಹಿಂದಿನ ತಪ್ಪುಗಳಿಂದ ನಾವು ಪಾಠ ಕಲಿತಿದ್ದೇವೆ. ಸೇತುವೆಯನ್ನು ಹೇಗೆ ಸರಿಪಡಿಸುವುದು ಮತ್ತು ಕಳಚುವುದು […]

ವರಾಹರೂಪಂ ಹಾಡಿನ ಮೊದಲನೆ ತಡೆ ಪಾರು: ಹಾಡಿನ ಬಳಕೆಗೆ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಅನುಮತಿ

ತಿರುವನಂತಪುರ: ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಕಾನೂನಾತ್ಮಕ ಸಂಘರ್ಷದಲ್ಲಿ ನಿರ್ಮಾಪಕರಾದ ಹೊಂಬಾಳೆ ಫಿಲಂಮ್ಸ್ ನ ಮೊದಲನೆ ತಡೆ ಪಾರಾಗಿದ್ದು, ಹಾಡಿನ ಬಳಕೆಗೆ ಅನುಮತಿ ದೊರೆತಿದೆ. ವರಾಹರೂಪಂ ಹಾಡನ್ನು ತನ್ನ ನವರಸಂ ಹಾಡಿನಿಂದ ಕೃತಿಚೌರ್ಯ ಮಾಡಲಾಗಿದೆ ಎಂದು ಕೇರಳದ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಕೋರ್ಟಿನಲ್ಲಿ ದಾವೆ ಹೂಡಿದ್ದು ಇದನ್ನು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಈ ವಿಚಾರವಾಗಿ ಈ ಹಾಡಿನ ಬರಹಗಾರ ಶಶಿರಾಜ್ ಕಾವೂರು, “ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ […]

ಕಾಸರಗೋಡು: ಭಕ್ತರ ಪ್ರೀತಿಯ ಬಬಿಯಾ ಇನ್ನಿಲ್ಲ; ವಿಷ್ಣುಲೋಕದತ್ತ ಪಯಣಿಸಿದ ದೈವಿಕ ಮೊಸಳೆ

ಕಾಸರಗೋಡು: ಇಲ್ಲಿನ ಅನಂತಪುರಂನ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಕೊಳದಲ್ಲಿ ವಾಸವಾಗಿದ್ದ ಭಕ್ತರ ಪ್ರೀತಿಯ ಮೊಸಳೆ ಬಬಿಯಾ ಸಾವನ್ನಪ್ಪಿದೆ. ಸುಮಾರು 75 ವರ್ಷ ವಯಸ್ಸಿನ ಈ ಮೊಸಳೆ ನಿನ್ನೆ ರಾತ್ರಿ ಸಾವನ್ನಪ್ಪಿದೆ. ದಂತಕಥೆಗಳ ಪ್ರಕಾರ, 1945 ರಲ್ಲಿ, ಬ್ರಿಟಿಷ್ ಅಧಿಕಾರಿಯೊಬ್ಬರು ದೇವಾಲಯದಲ್ಲಿ ಮೊಸಳೆಯೊಂದಕ್ಕೆ ಗುಂಡು ಹಾರಿಸಿದ್ದ ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿದ್ದಳು. ಬಬಿಯಾ ಸಂಪೂರ್ಣವಾಗಿ ಸಸ್ಯಾಹಾರಿಯಾಗಿದ್ದಳು. Babiya the crocodile lived in Ananthapadmanabha Swamy Lake Temple of kasargod is no more pic.twitter.com/mFF5bjN4SU […]