ಕೇರಳದಲ್ಲಿಂದು ಸಂಭ್ರಮದ ಓಣಂ: ವಾಮನ-ಬಲಿಯ ನೆನಪಿನ ಕುರುಹು ಈ ಹಬ್ಬ

ಶ್ರಾವಣ ಮಾಸದ ಶ್ರವಣಾ ನಕ್ಷತ್ರದಂದು ಮಹಾವಿಷ್ಣು ವಾಮನರೂಪದಲ್ಲಿ ಅವತರಿಸಿ, ಇಂದ್ರ ಪದವಿಯಲ್ಲಿದ್ದ ಬಲಿ ಚಕ್ರವರ್ತಿಯ ವಿಶ್ವಜಿತ್ ಯಾಗದಲ್ಲಿ ಮೂರು ಹೆಜ್ಜೆ ಭೂದಾನ ಕೇಳಿ, ಬಲಿಯ ಅಹಂಕಾರದ ಅಂಧಕಾರವನ್ನು ಕಳೆದು ಜ್ಞಾನದ ದೀವಿಗೆಯನ್ನು ಬೆಳಗಿದ ದಿನದ ನೆನಪಿಗಾಗಿ ಕೇರಳದಲ್ಲಿ ಆಚರಿಸುವ ಹಬ್ಬವೆ ಓಣಂ. ಸಂಸ್ಕೃತದ ಶ್ರಾವಣ ಅಪಭ್ರಂಶವಾಗಿ ಓಣಂ ಎಂದಾಗಿದೆ. ಬಲಿಯನ್ನು ಭಾರತದಿಂದ ಹೊರಗೆ ಕಳುಹಿಸಿದ್ದರ ಕುರುಹಾಗಿ ಅಂದು ಬಲಿಯ ಕಡೆಯವರು ದೋಣಿಗಳ ಮೂಲಕ ಪಲಾಯನಗೊಂಡದ್ದನ್ನು ಈ ದಿನದಂದು ದೋಣಿ ಸ್ಪರ್ಧೆಗಳ ಮೂಲಕ ನೆನಪಿಸಿಕೊಳ್ಳಲಾಗುತ್ತದೆ. ಅವಿಭಜಿತ ದ.ಕ ಜಿಲ್ಲೆಯಲ್ಲಿ […]

ಕೇರಳದ ಕಣ್ಣೂರಿನಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢ: ದ.ಕ ದಲ್ಲಿ ಹೈ ಅಲರ್ಟ್

ಮಂಗಳೂರು: ದ.ಕ ಜಿಲ್ಲೆಗೆ ತಾಗಿಕೊಂಡಿರುವ ಕೇರಳದಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ರೋಗ ಹರಡುವ ಆತಂಕ ಎದುರಾಗಿದೆ. ಮೇ 13 ರಂದು ದುಬೈನಿಂದ ಕೇರಳಕ್ಕೆ ಬಂದ 31 ವರ್ಷದ ಕಣ್ಣೂರು ಮೂಲದ ವ್ಯಕ್ತಿಯೊಬ್ಬರಿಗೆ ವೈರಲ್ ಕಾಯಿಲೆ ಇರುವುದು ದೃಢಪಟ್ಟಿದೆ. ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ವ್ಯಕ್ತಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆ ನೀಡಿದ್ದಾರೆ. ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ಇರಿಸಲಾಗಿದೆ. ವಿಮಾನ […]

ಪ್ರಾಣವನ್ನೂ ಲೆಕ್ಕಿಸದೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿಯ ಹೆಡೆ ಮುರಿ ಕಟ್ಟಿದ ಕೇರಳದ ಸಿಂಘಂ ಬಗ್ಗೆ ವ್ಯಾಪಕ ಮೆಚ್ಚುಗೆ

ತಿರುವನಂತಪುರಂ: ಇಲ್ಲಿನ ಆರೋಪಿಯೊಬ್ಬ ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ತಲವಾರಿನಿಂದ ಹಲ್ಲೆ ಮಾಡುತ್ತಿದ್ದು, ಅದನ್ನು ಸಮರ್ಥವಾಗಿ ಎದುರಿಸಿ, ಆರೋಪಿಯನ್ನು ಹೆಡೆಮುರಿ ಕಟ್ಟಿ ಪೊಲೀಸ್ ಜೀಪಿನಲ್ಲಿ ತಳ್ಳುತ್ತಿರುವ ವಿಡಿಯೋ ದೃಶ್ಯವೊಂದು ವೈರಲ್ ಆಗಿದ್ದು, ವಿಡೀಯೋದಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನ ಸಮಯೋಚಿತ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಆರೋಪಿ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದರೂ ಪ್ರಾಣವನ್ನೂ ಲೆಕ್ಕಿಸದೆ ಆತನ ಕೈಯಿಂದ ಮಚ್ಚು ಕಸಿದು, ಆತನನ್ನು ಬಂಧಿಸಿದ ಸಬ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಕೇರಳ ಸಿಂಘಂ ಆಗಿ ಹೊರಹೊಮ್ಮಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ […]

ಚಿನ್ನಾಭರಣ ಹಗರಣ ಪ್ರಕರಣ: ಕೇರಳ ಕಾಂಗ್ರೆಸ್‌ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ತಿರುವನಂತಪುರ: ಚಿನ್ನಾಭರಣ ಹಗರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ವಪ್ನಾ ಸುರೇಶ್ ಆರೋಪ ಮಾಡಿದ ಬೆನ್ನಲ್ಲೇ, ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಘಟಕ ಗುರುವಾರ ತಿರುವನಂತಪುರದಲ್ಲಿ ಪ್ರತಿಭಟನೆ ನಡೆಸಿದೆ. ಕೇರಳದ ರಾಜಧಾನಿಯಲ್ಲಿ ಕೇರಳ ಕಾಂಗ್ರೆಸ್ ಮಹಿಳಾ ಘಟಕ ಹಾಗೂ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ. ಚಿನ್ನ ತುಂಬಿದ […]

ಕೇರಳದಲ್ಲಿ ಮತ್ತೊಂದು ಸಾಂಕ್ರಾಮಿಕ: ರಾಜ್ಯದಲ್ಲಿ ನೊರೊವೈರಸ್ ನ ಎರಡು ಪ್ರಕರಣಗಳು ದೃಢ

ತಿರುವನಂತಪುರಂ: ರೋಟವೈರಸ್‌ನಂತೆಯೇ ಅತಿಸಾರವನ್ನು ಉಂಟುಮಾಡುವ ನೊರೊವೈರಸ್ ಸೋಂಕು ಇಲ್ಲಿನ ಇಬ್ಬರು ಮಕ್ಕಳಲ್ಲಿ ದೃಢಪಟ್ಟಿದೆ ಎಂದು ಕೇರಳ ಸರ್ಕಾರ ಭಾನುವಾರ ತಿಳಿಸಿದೆ. ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ರೋಗವು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜನರು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒತ್ತಾಯಿಸಿದ್ದಾರೆ. ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, […]