ಚಿನ್ನಾಭರಣ ಹಗರಣ ಪ್ರಕರಣ: ಕೇರಳ ಕಾಂಗ್ರೆಸ್‌ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ತಿರುವನಂತಪುರ: ಚಿನ್ನಾಭರಣ ಹಗರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ವಪ್ನಾ ಸುರೇಶ್ ಆರೋಪ ಮಾಡಿದ ಬೆನ್ನಲ್ಲೇ, ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಘಟಕ ಗುರುವಾರ ತಿರುವನಂತಪುರದಲ್ಲಿ ಪ್ರತಿಭಟನೆ ನಡೆಸಿದೆ. ಕೇರಳದ ರಾಜಧಾನಿಯಲ್ಲಿ ಕೇರಳ ಕಾಂಗ್ರೆಸ್ ಮಹಿಳಾ ಘಟಕ ಹಾಗೂ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ. ಚಿನ್ನ ತುಂಬಿದ […]

ಕೇರಳದಲ್ಲಿ ಮತ್ತೊಂದು ಸಾಂಕ್ರಾಮಿಕ: ರಾಜ್ಯದಲ್ಲಿ ನೊರೊವೈರಸ್ ನ ಎರಡು ಪ್ರಕರಣಗಳು ದೃಢ

ತಿರುವನಂತಪುರಂ: ರೋಟವೈರಸ್‌ನಂತೆಯೇ ಅತಿಸಾರವನ್ನು ಉಂಟುಮಾಡುವ ನೊರೊವೈರಸ್ ಸೋಂಕು ಇಲ್ಲಿನ ಇಬ್ಬರು ಮಕ್ಕಳಲ್ಲಿ ದೃಢಪಟ್ಟಿದೆ ಎಂದು ಕೇರಳ ಸರ್ಕಾರ ಭಾನುವಾರ ತಿಳಿಸಿದೆ. ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ರೋಗವು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜನರು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒತ್ತಾಯಿಸಿದ್ದಾರೆ. ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, […]

ಕೇರಳ: ಸೌದಿ ಅರೇಬಿಯಾಕ್ಕೆ ಪ್ರಯಾಣ ಬೆಳೆಸಿದ ಹಜ್ ಯಾತ್ರಾರ್ಥಿಗಳ ಮೊದಲನೆ ತಂಡ

ಕೇರಳ : ಸೌದಿ ಅರೇಬಿಯಾದ ಮದೀನಾಕ್ಕೆ ಹಜ್ ಯಾತ್ರಾರ್ಥಿಗಳ ಮೊದಲನೆ ಬ್ಯಾಚ್ ನ ಮೊದಲ ವಿಮಾನ ಶನಿವಾರ ಕೊಚ್ಚಿ ವಿಮಾನ ನಿಲ್ದಾಣದಿಂದ ನಿರ್ಗಮಿಸಿತು. ಕೇರಳದ ವಕ್ಫ್ ಮತ್ತು ಹಜ್ ಯಾತ್ರೆಯ ಸಚಿವರಾದ ವಿ ಅಬ್ದುರಹಿಮಾನ್ ಅವರು ಧ್ವಜಾರೋಹಣ ಮಾಡುವ ಮೂಲಕ ಮೊದಲನೆ ಬ್ಯಾಚ್ ಅನ್ನು ಬೀಳ್ಕೊಟ್ಟರು. ಸೌದಿ ಅರೇಬಿಯ ಏರ್‌ಲೈನ್ಸ್‌ನ ಎಸ್ ವಿ 5747 ವಿಮಾನದಲ್ಲಿ 377 ಪ್ರಯಾಣಿಕರು ಹಜ್ ಯಾತ್ರೆಗೆ ಹೊರಟಿದ್ದಾರೆ.  “ಭಾರತೀಯ ಹಜ್ ಯಾತ್ರಿಕರ ಮೊದಲ ಬ್ಯಾಚ್ ಇಂದು ಹೊರಟಿದೆ ಮತ್ತು ಕೊನೆಯ ವಿಮಾನ […]

ಕೇರಳದಲ್ಲಿ ಸಿಎಎ ಜಾರಿ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಪಾದಿಸಿದ್ದಾರೆ. ತಮ್ಮ ಸರ್ಕಾರದ ಮೊದಲ ವಾರ್ಷಿಕೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಹಾಗೆಯೆ ಮುಂದುವರಿಯಲಿದೆ” ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಕಾನೂನನ್ನು ಜಾರಿಗೊಳಿಸುವುದಾಗಿ ಆಗಾಗ್ಗೆ ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಅದರಲ್ಲಿ […]

ಕೇರಳಕ್ಕೆ ಮುಂಚಿತವಾಗಿ ಆಗಮಿಸಿದ ಮಾನ್ಸೂನ್: ಜೂನ್ 2 ರೊಳಗೆ ಕರ್ನಾಟಕಕ್ಕೆ ಮುಂಗಾರು ಮಳೆಯ ಸಿಂಚನ

ಬೆಂಗಳೂರು: ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮೂರು ದಿನಗಳ ಮುಂಚಿತವಾಗಿ ಭಾನುವಾರವೆ ಕೇರಳಕ್ಕೆ ಆಗಮಿಸಿದ್ದು, ಜೂನ್ 2 ರ ವೇಳೆಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ. ಇದು ನಾಲ್ಕು ತಿಂಗಳ ಅವಧಿಯ ಸಾಮಾನ್ಯ ಮಳೆಗಾಲದ ಮುನ್ಸೂಚನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ತಮಿಳುನಾಡು, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಭಾರೀ ಮಳೆ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಬೆಳಿಗ್ಗೆ 8.30 ಕ್ಕೆ ದಾಖಲಿಸಿದ ಮಾಹಿತಿಯು ತೋರಿಸಿದೆ. ಕೇರಳದ 14 ಹವಾಮಾನ ಕೇಂದ್ರಗಳಲ್ಲಿ […]