ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ: ರಾಜ್ಯದಲ್ಲಿನ 5 ವರ್ಷದೊಳಗಿನ ಪ್ರತಿ ಮೂರನೇ ಮಗುವಿನ ಬೆಳವಣಿಗೆ ಕುಂಠಿತ

ಬೆಂಗಳೂರು: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಮತ್ತು ಕ್ಷೀರ ಭಾಗ್ಯದಂತಹ ರಾಜ್ಯ ಸರ್ಕಾರದ ಯೋಜನೆಗಳ ಹೊರತಾಗಿಯೂ, ಕರ್ನಾಟಕದಲ್ಲಿ ಐದು ವರ್ಷದೊಳಗಿನ 35% ಮಕ್ಕಳ ಬೆಳವಣಿಗೆ ಕುಂಠಿತವಾಗಿದೆ. ಮೇ 3 ರಂದು ಬಿಡುಗಡೆ ಮಾಡಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 ರ ಪ್ರಕಾರ, ರಾಜ್ಯದಲ್ಲಿನ 5 ವರ್ಷದೊಳಗಿನ ಪ್ರತಿ ಮೂರನೇ ಮಗುವಿನ ಬೆಳವಣಿಗೆ ಕುಂಠಿತವೆಂದು ತಿಳಿಸಲಾಗಿದೆ. ತೆಳ್ಳಗಿನ ತಾಯಂದಿರಿಗೆ ಜನಿಸುವ ಮಕ್ಕಳು ಕುಂಠಿತಗೊಳ್ಳುತ್ತಾರೆ ಮತ್ತು ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಕುಂಠಿತಗೊಳ್ಳುವಿಕೆಯ ಪ್ರಮಾಣ ಹೆಚ್ಚಾಗಿರುತ್ತದೆ. ವಯಸ್ಸಿಗಿಂತ ಗಿಡ್ಡವಾಗಿರುವುದು ಅಥವಾ […]

ಕೇರಳದಲ್ಲಿ ಟೊಮೇಟೊ ಜ್ವರ ಪತ್ತೆ: ಐದು ವರ್ಷ ಕೆಳಗಿನ ಮಕ್ಕಳಲ್ಲಿ ಹೆಚ್ಚಿದ ಸೋಂಕು

ಕೊಯಂಬತ್ತೂರು: ಕೇರಳದ ಹಲವಾರು ಭಾಗಗಳಲ್ಲಿ ಮತ್ತೊಂದು ವೈರಸ್ ಪತ್ತೆಯಾಗಿದೆ. ಟೊಮೆಟೊ ಜ್ವರ ಅಥವಾ ಟೊಮೆಟೋ ಫ್ಲೂ ಎಂದು ಗುರುತಿಸಲಾಗುವ ಈ ಅಪರೂಪದ ವೈರಲ್ ಕಾಯಿಲೆಯು ಮಕ್ಕಳಲ್ಲೇ ಹೆಚ್ಚಾಗಿ ಕಂಡುಬರುತ್ತದೆ. ರಾಜ್ಯದಲ್ಲಿ ಇದುವರೆಗೆ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿಸಿದೆ ಎಂದು ಪಿಟಿಐ ವರದಿ ಮಾಡಿದೆ. ವರದಿಯ ಪ್ರಕಾರ, ಈ ಸಂಖ್ಯೆ ಮತ್ತಷ್ಟು ಏರುವ ಮುನ್ಸೂಚನೆಗಳಿವೆ. ರೋಗ ಲಕ್ಷಣಗಳು: # ಟೊಮೆಟೊ ಫ್ಲೂ ಪತ್ತೆ ಹಚ್ಚಲಾಗದ ಜ್ವರವಾಗಿದ್ದು, ಐದು ವರ್ಷಕ್ಕಿಂತ ಕಡಿಮೆ […]

ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದ ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಮಾದರಿ ಜಿಲ್ಲೆಯನ್ನಾಗಿಸಲು ಸಂಬಂಧಪಟ್ಟ ಎಲ್ಲಾಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕನ್ ಸರ್ನ್ ಫಾರ್ ವರ್ಕಿಂಗ್ ಚಿಲ್ಡ್ರನ್ ಕುಂದಾಪುರ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ, ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯ […]

ಆಕ್ಸೆಸ್‌ಲೈಫ್ ಮಾಹೆ ಮಣಿಪಾಲ ಕೇಂದ್ರ (ಹೋಮ್ ಆವೇ ಫ್ರಮ್ ಹೋಮ್) ಉದ್ಘಾಟನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲ ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಾಹೆ  ಮಣಿಪಾಲದ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ ಆಕ್ಸೆಸ್‌ಲೈಫ್  ಮಾಹೆ  ಮಣಿಪಾಲ ಕೇಂದ್ರವನ್ನು (ಕ್ಯಾನ್ಸರ್ ಪೀಡಿತ ಮಕ್ಕಳು ಮತ್ತು ಅವರ ಆರೈಕೆದಾರರಿಗಾಗಿ ಹೋಮ್ ಆವೇ ಫ್ರಮ್ ಹೋಮ್) ಇಂದು ಉದ್ಘಾಟಿಸಲಾಯಿತು. ಇದು ಕ್ಯಾನ್ಸರ್ ಇರುವ ಮಕ್ಕಳಿಗೆ ಮತ್ತು ಅವರ ಆರೈಕೆ ಮಾಡುವವರಿಗೆ ಉಚಿತವಾಗಿ  ವಸತಿ, ಪೌಷ್ಟಿಕ ಆಹಾರ, ಸಮಾಲೋಚನೆ ಮತ್ತು ಶೈಕ್ಷಣಿಕ ಸಹಾಯ ಸೇವೆಗಳನ್ನು ಒದಗಿಸುತ್ತದೆ. ಇದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, […]

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್

ಉಡುಪಿ: ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಉತ್ತಮ ತರಬೇತಿ ದೊರೆಯಲಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶರ್ಮಿಳಾ. ಎಸ್ ಹೇಳಿದರು. ಅವರು ಇಂದು ಬಾಲಭವನ ಸೊಸೈಟಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ […]