ಕೆ.ಎಂ.ಸಿ ಆಸ್ಪತ್ರೆಯಲ್ಲಿ ಕರಾವಳಿಯ ಮೊದಲ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಅಸ್ಥಿಮಜ್ಜೆ ಕಸಿ ಯಶಸ್ವಿ ಚಿಕಿತ್ಸೆ

ಮಣಿಪಾಲ: ಒಂದು ವರ್ಷದ ಬಾಲಕನಿಗೆ ಸಿವಿಯರ್ ಕಂಬೈನ್ಡ್ ಇಮ್ಯುನೊ ಡೆಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆ ಇರುವುದು ಪತ್ತೆಯಾಗಿತ್ತು. ಬಾಲಕನನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಅಸ್ಥಿಮಜ್ಜೆ (ಬೋನ್ ಮಾರೋ ಟ್ರಾನ್ಸ್ ಪ್ಲಾಂಟೇಶನ್) ಕಸಿ ಮಾಡಲು ಕಳುಹಿಸಲಾಗಿತ್ತು. ಅಸ್ಥಿಮಜ್ಜೆ ಕಸಿ ಮಾಡುವುದೊಂದೆ ಆತನ ಕಾಯಿಲೆಯನ್ನು ಗುಣಪಡಿಸಬಲ್ಲ ಏಕೈಕ ಚಿಕಿತ್ಸೆಯಾಗಿತ್ತು. ಮೂಳೆ ಮಜ್ಜೆಯ ಕಸಿ ಎನ್ನುವುದು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡವು ಮಾಡುವ ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದೆ. ಅಸ್ಥಿ ಮಜ್ಜೆ ಕಸಿ […]

ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂಡೋ-ಜರ್ಮನ್ ಶೈಕ್ಷಣಿಕ ಪಾಲುದಾರಿಕೆಯ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿಗುರುವಾರ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)ವನ್ನು ಉದ್ಘಾಟಿಸಲಾಯಿತು ಬೆಂಗಳೂರಿನ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಆಕಿಮ್ ಬುರ್ಕಾರ್ಟ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾಹೆ ಸಂಸ್ಥೆಯು ಶಿಕ್ಷಣ, ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಹೊಸ ಆವಿಷ್ಕಾರಗಳ ಕೇಂದ್ರವಾಗಿದೆ. ವೈದ್ಯಕೀಯ ಜ್ಞಾನವನ್ನು ಹೆಚ್ಚಿಸುವ ಬದ್ಧತೆಯೊಂದಿಗೆ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿದೆ. […]

ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದ ಮೊದಲ ಅತ್ಯಾಧುನಿಕ ಎಂಡೋಸ್ಕೋಪಿ ಶಸ್ತ್ರಚಿಕಿತ್ಸೆ ಯಶಸ್ವಿ

ಮಣಿಪಾಲ: ಇಲ್ಲಿನ ಕೆ.ಎಂ.ಸಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ. ಗಣೇಶ್ ಭಟ್, ಡಾ. ಅತಿಶ್ ಶೆಟ್ಟಿ, ಡಾ. ಬಾಲಾಜಿ ಮತ್ತು ಡಾ. ಸಂದೇಶ್ ಶೇಟ್ (ಅರಿವಳಿಕೆ) ಸಹಾಯದೊಂದಿಗೆ ಎಂಡೋಅಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ವನ್ನು ಯಶಸ್ವಿಯಾಗಿ ನಡೆಸಿದರು. ಕ್ಯಾನ್ಸರ್ ನಿಂದಾಗಿ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯನ್ನು ಹೊಂದಿರುವ ವ್ಯಕ್ತಿಗೆ ಯಶಸ್ವಿಯಾಗಿ ಈ ಕಾರ್ಯವಿಧಾನ ನಡೆಸಿದರು. ಈ ವಿಧಾನವು ಶಸ್ತ್ರಚಿಕಿತ್ಸೆಗಿಂತ […]

ಕೆ.ಎಂ.ಸಿ ಆಸ್ಪತ್ರೆ ವತಿಯಿಂದ “ಯುವೈಟಿಸ್ ಪೇ ಚರ್ಚಾ” ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಣಿಪಾಲ: ನೇತ್ರಶಾಸ್ತ್ರ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ, ಯುವೈಟಿಸ್ ಸೊಸೈಟಿ ಆಫ್ ಇಂಡಿಯಾ, ಕರ್ನಾಟಕ ಆಫ್ತಾಲ್ಮಿಕ್ ಸೊಸೈಟಿ (KOS) ಆಶ್ರಯದಲ್ಲಿ ಉಡುಪಿ ಜಿಲ್ಲಾ ಆಫ್ತಾಲ್ಮಿಕ್ ಸೊಸೈಟಿ (UDOS) ಸಹಯೋಗದೊಂದಿಗೆ ಕೆಎಂಸಿ, ಮಣಿಪಾಲದ ಇಂಟರಾಕ್ಟ್ ಸಭಾಂಗಣದಲ್ಲಿ ಫೆ. 26 ರಂದು “ಯುವೈಟಿಸ್ ಪೇ ಚರ್ಚಾ” ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ನಡೆಯಿತು. ಕೆಎಂಸಿ ಆಸ್ಪತ್ರೆಯ ಡೀನ್ ಡಾ.ಪದ್ಮರಾಜ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರೋಗಿಗಳ ಆರೈಕೆಯನ್ನು ಸುಧಾರಿಸುವಲ್ಲಿ ಉಪವಿಭಾಗಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು ಮತ್ತು […]

ಮಣಿಪಾಲದ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನ ನಿಮಿತ್ತ ಕಾರ್ಯಕ್ರಮ

ಮಣಿಪಾಲ: ಸರಿಯಾದ ತಂಡದ ಸಹಾಯದಿಂದ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿದರೆ ಬಾಲ್ಯದ ಹೆಚ್ಚಿನ ಕ್ಯಾನ್ಸರ್ ಗಳನ್ನು ಗುಣಪಡಿಸಬಹುದು. ಬಾಲ್ಯದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಅವರ ಆರೈಕೆ ಮಾಡುವವರು ಮತ್ತು ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಬೆಂಬಲ ವ್ಯಕ್ತಪಡಿಸಲು ಜಾಗತಿಕವಾಗಿ ಪ್ರತಿ ವರ್ಷ ಫೆಬ್ರವರಿ 15 ರಂದು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನವನ್ನು (ಐ ಸಿ ಸಿ ಡಿ ) ಆಚರಿಸಲಾಗುತ್ತದೆ. “ಉತ್ತಮ ಬದುಕುಳಿಯುವಿಕೆ ನಿಮ್ಮ ಮೂಲಕ ಸಾಧಿಸಬಹುದಾಗಿದೆ” ಎಂಬುದು ಐ ಸಿ […]