ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿ ಡಾ. ಪದ್ಮರಾಜ್ ಹೆಗ್ಡೆ ನೇಮಕ

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಕೆ.ಎಂ.ಸಿ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ಪದ್ಮರಾಜ್ ಹೆಗ್ಡೆ ಅವರನ್ನು ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿ ಜ.1ರಂದು ನೇಮಕ ಮಾಡಲಾಗಿದೆ. ಡಾ.ಪದ್ಮರಾಜ್ ಹೆಗ್ಡೆ ಉಡುಪಿ ಜಿಲ್ಲೆಯ ಆತ್ರಾಡಿಯವರು. ಇವರು ಎಂಬಿಬಿಎಸ್ ಮತ್ತು ಎಂಎಸ್ ಜನರಲ್ ಸರ್ಜರಿ ಮತ್ತು ಎಂ.ಸಿಎಚ್ ಅನ್ನು (ಜೆನಿಟೋ ಯುರಿನರಿ ಸರ್ಜರಿ) ಮಣಿಪಾಲದ ಕೆಎಂಸಿಯಲ್ಲಿ ಪೂರ್ಣಗೊಳಿಸಿದ್ದಾರೆ. ಸ್ಕಾಟ್ಲೆಂಡ್ ನ ಗ್ಲಾಸ್ಗೋ ವಿಶ್ವವಿದ್ಯಾಲಯವು ಇವರಿಗೆ ಎಫ್‌ಆರ್‌ಸಿಎಸ್ ನೀಡಿದೆ ಮತ್ತು ಇವರು ಆಸ್ಪತ್ರೆ ಆಡಳಿತ ಮತ್ತು […]

ಕೆ.ಎಂ.ಸಿ ಆಸ್ಪತ್ರೆ: ವಿಶ್ವ ಹೃದಯ ದಿನದ ಅಂಗವಾಗಿ ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣ

ಮಣಿಪಾಲ: ಪ್ರತಿ ವರ್ಷ ಸೆಪ್ಟೆಂಬರ್ 29 ಅನ್ನು ವಿಶ್ವ ಹೃದಯ ದಿನವನ್ನಾಗಿ ಆಚರಿಸಲಾಗುತ್ತದೆ. ಹೃದಯ ರಕ್ತನಾಳದ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ, ಇದು ಪ್ರಪಂಚದ ಎಲ್ಲಾ ಸಾಂಕ್ರಾಮಿಕವಲ್ಲದ ರೋಗಗಳ ಪಾಲಿನ ಅರ್ಧದಷ್ಟಿದೆ. ವಿಶ್ವ ಹೃದಯ ದಿನದ 2022 ರ ಘೋಷ ವಾಕ್ಯ “ಪ್ರತಿ ಹೃದಯಕ್ಕಾಗಿ ಹೃದಯವನ್ನು ಬಳಸಿ” ಎನ್ನುವುದಾಗಿದೆ. ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗ, ಹೃದಯ ರಕ್ತನಾಳ ಮತ್ತು ಎದೆಗೂಡಿನ ಶಸ್ತ್ರಚಿಕಿತ್ಸಾ […]

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಲಚ್ಚು ಪೂಜಾರಿ ಸಾವು

ಉಡುಪಿ: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ಲಚ್ಚು ಪೂಜಾರಿ (77) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.