ಕೋಲ್ಕತ್ತ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಭೇಟಿಗೆ ಮೃತಳ ತಾಯಿ ಮನವಿ.!

ಕೋಲ್ಕತ್ತ: ಆರ್.ಜಿ. ಕರ್ ಆಸ್ಪತ್ರೆಯ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಮೃತಳ ತಾಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಕೋರಿಕೆ ವ್ಯಕ್ತಪಡಿಸಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. ‘ಪ್ರಧಾನಿಯವರನ್ನು ಭೇಟಿಯಾಗಿ ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡುವುದಾಗಿ’ ಮೃತಳ ತಾಯಿ ತಿಳಿಸಿದ್ದಾರೆ. ‘ನನ್ನ ಮಗಳು ದೊಡ್ಡ ಕನಸು ಕಂಡಿದ್ದಳು. ಅವಳು ಇಷ್ಟು […]