ರಿಷಬ್ ಶೆಟ್ಟಿಯವರ ಕಾಂತಾರ ಚಾಪ್ಟರ್-1 ಚಿತ್ರಕ್ಕೆ ವಿಘ್ನ, ಚಿತ್ರ ಕಲಾವಿದರಿದ್ದ ಬಸ್ ಪಲ್ಟಿ; 6 ಮಂದಿಗೆ ಗಂಭೀರ ಗಾಯ..!
ಉಡುಪಿ:ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಒಂದು ಪಲ್ಟಿಯಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ 25 ಕಲಾವಿದರಿದ್ದ ಬಸ್ ಅಪಘಾತವಾಗಿದೆ. ಬಸ್ ಪಲ್ಟಿ ಆಗಿ ಹಲವರಿಗೆ ಗಾಯವಾಗಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ […]