ಕೊರೊನಾ ವೈರಸ್ ಕುರಿತು ಸುಳ್ಳು ವದಂತಿಗಳನ್ನು ನಂಬಬೇಡಿ – ಡಾ. ಸುಧೀರ್ ಚಂದ್ರ ಸೂಡ
ಉಡುಪಿ : ಕೊರೊನಾ ವೈರಸ್ನಿಂದ ಹರಡುವ ರೋಗದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಸಾರ್ವಜನಿಕರು ಈ ವದಂತಿಗಳನ್ನು ನಂಬದಂತೆ ಹಾಗೂ ಗಾಬರಿಪಡುವ ಮತ್ತು ಯಾವುದೇ ಆತಂಕಗೊಳಗಾಗುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಡಿಹೆಚ್ಓ ಡಾ. ಸುಧೀರ್ಚಂದ್ರ ಸೂಡ ತಿಳಿಸಿದರು. ಅವರು ಗುರುವಾರ ಡಿಎಚ್ಓ ಕಚೇರಿಯಲ್ಲಿ ನಡೆದ , ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಕುರಿತ ಕೈಗೊಂಡಿರುವ ಕ್ರಮಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಂಗಳವಾರ ಇಸ್ರೇಲ್ನಿಂದ ಉಡುಪಿಗೆ […]