ಕೋಟ: ಭಾರೀ ಮಳೆಗೆ ಆಯತಪ್ಪಿ ಸ್ಕೂಟರ್ ಸಮೇತ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕೋಟ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ಕೂಟರ್ ಸವಾರರೊಬ್ಬರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸ್ಥಳಿಯ ನಿವಾಸಿ ದಿವಾಕರ್ ಶೆಟ್ಟಿ( 65) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ತಮ್ಮ ಸ್ಕೂಟರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಮನೆ ಸಮೀಪದ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದಾರೆ. ಸುಮಾರು 15- 20 ಅಡಿ ಆಳದ ಕೆರೆಗೆ […]

ಕೋಟ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿವೇಕ ಪ.ಪೂ ಕಾಲೇಜಿಗೆ ಶೇ. 99.5 ಫಲಿತಾಂಶ

ಕೋಟ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿವೇಕ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಶೇ. 99.5 ಫಲಿತಾಂಶ ದಾಖಲಿಸಿದ್ದಾರೆ. ಒಟ್ಟು ಹಾಜರಾದ 573 ವಿದ್ಯಾರ್ಥಿಗಳಲ್ಲಿ 314 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 236 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 20 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವೈದೇಹಿ.ವಿ.ಪೈ 588 ಅಂಕ ಪಡೆದು ಪ್ರಥಮ ಸ್ಥಾನ, ಶ್ರೀನಿಧಿ 585 ಅಂಕ ಪಡೆದು ದ್ವಿತೀಯ ಹಾಗೂ ರಾಘವೇಂದ್ರ ಅಡಿಗ 584 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ […]

ಕೋಟ: ಮಾ.24 ರಂದು ಗಾಯಕಿ ಕೆ.ಎಸ್.ಚಿತ್ರ ಹಾಗೂ ಡಾ.ಸಿ.ಆರ್.ಚಂದ್ರಶೇಖರ್ ಇವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಕೋಟದ: ಮನಸ್ಮಿತ ಫೌಂಡೇಶನ್ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಹಾಗೂ ಯುವ ಮೆರಿಡಿಯನ್ ಸಹಭಾಗಿತ್ವದಲ್ಲಿ ನೀಡಲ್ಪಡುವ ಡಾ. ಎಸ್. ಜಾನಕಿ ರಾಷ್ಟ್ರೀಯ ಪ್ರಶಸ್ತಿ 2023 ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮವು ಮಾ.24 ರಂದು ಯುವ ಮೆರಿಡಿಯನ್ ಒಪೆರಾ ಪಾರ್ಕಿನಲ್ಲಿ ನಡೆಯಲಿದೆ. 2023 ನೇ ಸಾಲಿನ ಎಸ್.ಜಾನಕಿ ರಾಷ್ಟ್ರೀಯ ಪ್ರಶಸ್ತಿಗೆ ಭಾರತದ ಖ್ಯಾತ ಗಾಯಕಿ ಪದ್ಮಭೂಷಣ ಕೆ.ಎಸ್.ಚಿತ್ರಾ ಹಾಗೂ ಮನಸ್ಮಿತ ಪುರಸ್ಕಾರಕ್ಕೆ ವೈದ್ಯಕೀಯ ಲೋಕದ ಸಂತ, ಸಾಹಿತಿ ಡಾ.ಸಿ.ಆರ್. ಚಂದ್ರಶೇಖರ್ ಅವರನ್ನು ಆಯ್ಕೆಗೊಳಿಸಲಾಗಿದೆ. ಎಸ್. ಜಾನಕಿ ರಾಷ್ಟ್ರೀಯ […]

ಕೋಟ: ನಿಶಾಚರಿ ಕಳ್ಳರ ಬಂಧನ; 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಸಹಿತ ವಾಹನ ವಶ

ಕೋಟ: ರಾತ್ರಿ ಹೊತ್ತು ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಚಿನ್ನಾಭರಣ ಹಾಗೂ 3 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪು ಎಲ್ಲೂರು ನಿವಾಸಿ ರಾಜೇಶ್ ದೇವಾಡಿಗ (38) ಮತ್ತು ಕಾರ್ಕಳ ಹೊಸ್ಮಾರು ಈದು ನಿವಾಸಿ ಮೊಹಮ್ಮದ್ ರಿಯಾಜ್ ಹೊಸ್ಮಾರ್ ಯಾನೆ ರಿಯಾಜ್ (39) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ […]

ಕೋಟ: ಮಧುವನ ವಿವೇಕಾನಂದ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

ಕೋಟ: ವಿವೇಕಾನಂದ ಹಿ‌.ಪ್ರಾ.ಶಾಲೆ ಮಧುವನ – ಅಚ್ಲಾಡಿ ಇಲ್ಲಿನ ಶಾಲಾ ವಾರ್ಷಿಕೋತ್ಸವ “ಮಕ್ಕಳ ಹಬ್ಬ” ಡಿ. 26 ರಂದು ಶಾಲಾ ವಠಾರದಲ್ಲಿ ಜರಗಿತು. ಉದ್ಯಮಿ ಬನ್ನಾಡಿ ದಿನಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಜನಾಂಗವು ಮುಂದಿನ ಭವಿಷ್ಯದ ಭರವಸೆಯಾಗಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯ ಉಜ್ವಲಗೊಳಿಸಿ ಎಂದರು. ಮುಂಬೈ ಉದ್ಯಮಿ, ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಅಚ್ಲಾಡಿ ಮಾತನಾಡಿ, ಜೀವನದಲ್ಲಿ ಕಷ್ಟ ಪಟ್ಟು ದುಡಿದರೆ ಯಶಸ್ಸು ಸಾಧ್ಯ. ನಾವೆಲ್ಲ ಬದುಕಲ್ಲಿ […]