ಕುಳಾಯಿ: ಶ್ರೀ ರಾಘವೇಂದ್ರ ಸ್ವಾಮಿ ಮಠ ಸಂಸ್ಥಾಪನಾ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಳಾಯಿ: ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಭಾಗವಹಿಸಿದ್ದರು. ಸಮಾರಂಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]

ಶ್ರೀ ರಾಘವೇಂದ್ರ ಮಠದ ಸಂಸ್ಥಾಪನಾ ರಜತ ಮಹೋತ್ಸವ ಸಂಭ್ರಮ: ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ತುಲಾಭಾರ ಕಾರ್ಯಕ್ರಮ

ಆತ್ಮೀಯ ಗುರುಭಕ್ತರೇ, ಶ್ರೀಮತ್ ಶುಭಕೃತ್ ನಾಮ ಸಂವತ್ಸರದ ಆಷಾಢ ಮಾಸ ಕೃಷ್ಣ ಪಕ್ಷದ ದಶಮಿ ತಾ. 23-07-2022ನೇ ಶನಿವಾರದಂದು ಕೀರ್ತಿ ಶೇಷ ಶ್ರೀ ವಾದೀಶ ಆಚಾರ್ಯರ ಪುಣ್ಯ ಸ್ಮರಣೆಯೊಂದಿಗೆ ಶ್ರೀ ಹರಿವಾಯು ಗುರುಗಳ ಪರಮ ಸನ್ನಿಧಾನವಾದ ಶ್ರೀ ಮಠದ ಸಂಸ್ಥಾಪನಾ ರಜತ ಮಹೋತ್ಸವ ಸಂಭ್ರಮ ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಷಷ್ಟ್ಯಬ್ಧಿ ಪ್ರಯುಕ್ತ ಶ್ರೀಗಳಿಗೆ “ತುಲಾಭಾರ”ವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಭಕ್ತಾಭಿಮಾನಿಗಳಾದ ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುಗಳಿಂದ […]