ಕುಂದಾಪುರ: ಹಳ್ಳಿಗಾಡಿನ ಈ ಯುವಕ ವಿಶ್ವದ ಗಮನ ಸೆಳೆದ್ರು: ವಿಶ್ವನಾಥ ಗಾಣಿಗರ ಸಾಧನೆಯ ಕತೆ ಕೇಳಿ
-ಶ್ರೀಕಾಂತ ಹೆಮ್ಮಾಡಿ ಬಾಲ್ಯದಲ್ಲಿ ಕಿತ್ತುತಿನ್ನುವ ಬಡತನವೇ ತಮ್ಮ ಸಾಧನೆಗೆ ಅಡ್ಡಿಯಾಯಿತು ಎಂದು ಹೇಳುವ ಮಂದಿ ಹಲವರಿದ್ದಾರೆ. ಆದರೆ ಬಡತನಕ್ಕೆ ಸೆಡ್ಡು ಹೊಡೆದು ಅದ್ಭುತ ಕ್ರೀಡಾಳುವಾಗಿ ರೂಪುಗೊಂಡು ದೇಶದ ಗಮನವನ್ನೇ ಸೆಳೆದ ಈ ಹಳ್ಳಿಗಾಡಿನ ಯುವಕನ ಯಶೋಗಾಥೆಯನ್ನು ಕೇಳಿದರೆ ನೀವೂ ಕೂಡ ಶಹಬ್ಬಾಸ್ ಎನ್ನುತ್ತೀರಿ. ಹಾಗಾದರೆ ಯಾರು ಆ ಸಾಧಕ.. ಆತ ಮಾಡಿರುವ ಸಾಧನೆಯಾದರು ಏನು ಅಂತೀರಾ ಇಲ್ಲಿದೆ ಆ ಸಾಧಕನ ಯಶೋಗಾಥೆ. ಹಳ್ಳಿ ಹುಡುಗನ ಯಶೋಗಾಥೆ: ಇತ್ತೀಚೆಗಷ್ಟೇ ಕೆನಡಾದಲ್ಲಿ ನಡೆದ ಕಾಮನ್ವೆಲ್ತ್ ಅಥ್ಲೆಟಿಕ್ಸ್ನ ಪವರ್ಲಿಫ್ಟಿಂಗ್ನಲ್ಲಿ ಎರಡು ಚಿನ್ನ […]