ಡಿ.14 ರಂದು ಜನತಾ ಸ್ವತಂತ್ರ ಪ.ಪೂ ಕಾಲೇಜಿನಲ್ಲಿ ಜನತಾ ಆವಿಷ್ಕಾರ್-2022 ಸ್ಪರ್ಧೆ

ಕುಂದಾಪುರ: ಇಲ್ಲಿನ ಹೆಮ್ಮಾಡಿಯಲ್ಲಿರುವ ಜನತಾ ಸ್ವತಂತ್ರ ಪ.ಪೂ ಕಾಲೇಜಿನಲ್ಲಿ ಶ್ರೀ ವಿವಿವಿ ಮಂಡಳಿ ಹೆಮ್ಮಾಡಿ ಹಾಗೂ ಸಮರ್ಪಣ ಶೈಕ್ಷಣಿಕ ಟ್ರಸ್ಟ್ ಸಯೋಗದೊಂದಿಗೆ ಜನತಾ ಆವಿಷ್ಕಾರ್-2022 ಸ್ಪರ್ಧೆಯನ್ನು ಡಿ.14 ರಂದು ಬೆಳಗ್ಗೆ 9 ಆಯೋಜಿಸಲಾಗಿದ್ದು, ವ್ಯಾಪಾರ ಮಳಿಗೆ ವಿಜ್ಞಾನ ಮಾದರಿ ಮತ್ತು ಸಾಂಸ್ಕೃತಿಕ ಸಂಭ್ರಮ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮರ್ಪಣ ಶೈಕ್ಷಣಿಕ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಮೊಗವೀರ್ ಇವರು ವಹಿಸಲಿದ್ದು, ಮುಖ್ಯ ಅತಿಥಿ ಮತ್ತು ಉದ್ಘಾಟಕರಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭಾಗವಹಿಸಲಿದ್ದಾರೆ. ವಿಶೇಷ […]

200 ವರ್ಷಗಳ ಇತಿಹಾಸದ ಮೊಳಹಳ್ಳಿ ಕಂಬಳಕ್ಕೆ ಕ್ಷಣಗಣನೆ: ಡಿ. 12 ರಂದು ಕಂಬಳ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಮೊಳಹಳ್ಳಿ: ಐತಿಹಾಸಿಕ ಪುರಾಣ ಪ್ರಸಿದ್ಧ ಮೊಳಹಳ್ಳಿ ಕಂಬಳ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಸುಮಾರು 200 ವರ್ಷಗಳಕ್ಕಿಂತಲೂ ಹಳೆಯ ಇತಿಹಾಸ ಹೊಂದಿರುವ ಕಂಬಳ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ನಡೆಯಲು ಸಜ್ಜಾಗಿದೆ. ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಳಹಳ್ಳಿ ಕಂಬಳ ಡಿ. 12 ರಂದು ಸೋಮವಾರ ಮಧ್ಯಾಹ್ನದಿಂದ ಪ್ರಾರಂಭವಾಗಲಿದೆ. ಕುಂದಾಪುರ ತಾಲೂಕಿನ ಬಹುದೊಡ್ಡ ಗ್ರಾಮಗಳಲ್ಲಿ ಮೊಳಹಳ್ಳಿ ಎಂಬ ಊರು ಹೆಸರುವಾಸಿ. ಅಲ್ಲದೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಿಂತನೆಯುಳ್ಳ ಗ್ರಾಮವಾಗಿ ಬೆಳೆದಿದೆ. ಮೊಳಹಳ್ಳಿ ಗ್ರಾಮ ‘ಸುವರ್ಣ ಗ್ರಾಮ’ […]

ಸಪತ್ನೀಕ ಸಮೇತರಾಗಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ

ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಪತ್ನೀಕ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.  

ಕೋಟೇಶ್ವರ ಕೊಡಿ ಹಬ್ಬದಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿಹಿಂಪ ಮನವಿ

ಕುಂದಾಪುರ: ಕೋಟೇಶ್ವರ ಕೋಟಿ ಲಿಂಗೇಶ್ವರ ದೇವಸ್ಥಾನದಲ್ಲಿ ಡಿ.8 ರಂದು ಕೊಡಿಹಬ್ಬ ಜಾತ್ರೆ ನಡೆಯಲಿದ್ದು, ಜಾತ್ರಯ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಆಡಳಿತಾಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ ಮನವಿ ನೀಡಿದೆ. ನಿರಂತರ ಹಿಂದೂಗಳ ಮೇಲೆ ಹೆಚ್ಚುತ್ತಿರುವ ಆಕ್ರಮಣ, ಲವ್ ಜಿಹಾದ್, ದೇಶದಲ್ಲಿ ದೇವಸ್ಥಾನದ ಬಾಗಿಲಿನಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಮಾಡುವವರಿಗೆ ದೇವಸ್ಥಾನಗಳ ಬಾಗಿಲಿನಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎನ್ನುವ ದೃಷ್ಟಿಯಿಂದ ಮನವಿ ಸಲ್ಲಿಸಲಾಗಿದೆ. ಹಿಂದೂ ವ್ಯಾಪಾರಿಗಳು ಮುಸ್ಲಿಂ ಉರೂಸ್ ಸಂದರ್ಭದಲ್ಲಿ ಹಿಂದೂಗಳಿಗೆ […]

ಡಿ.8,9 ಮತ್ತು 10 ರಂದು ಎಕ್ಸಲೆಂಟ್ ಕಾಲೇಜಿನಲ್ಲಿ ಪ.ಪೂ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ ಡಿ.8,9 ಮತ್ತು 10 ರಂದು ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದ್ದಾರೆ.